Homeಅಂಕಣಗಳುಟ್ರಂಪ್ ಇರಾನ್ ಮೇಲೆ ಬಿದ್ರೆ, ಮೋದಿ ನಮ್ಮ ಮೇಲೆ ಬಿದ್ದವುನೆ

ಟ್ರಂಪ್ ಇರಾನ್ ಮೇಲೆ ಬಿದ್ರೆ, ಮೋದಿ ನಮ್ಮ ಮೇಲೆ ಬಿದ್ದವುನೆ

- Advertisement -
- Advertisement -

ಈ ಶತಮಾನದ ರಾಜಕೀಯ ದ್ರೋಹ ಯಾವುದೆಂದರೆ ಸಭ್ಯ ರಾಜಕಾರಣಿಗಳು ಕೊಡುವ ಉತ್ತರ ಎಸ್ಸೆಂ ಕೃಷ್ಣರ ಪಕ್ಷಾಂತರವಂತಲ್ಲಾ. ಹಾಗಾದರೆ ಕೃಷ್ಣ ಅಂತಹ ದ್ರೋಹ ಮಾಡಿದ್ದಾರೆ ಎಂದರೆ ಅನಿವಾರ್ಯವಾಗಿ ಹೌದು ಎನ್ನಬೇಕಾಗುತ್ತದೆ. ಏಕೆಂದರೆ ಅವರ ರಾಜಕೀಯ ಜೀವನದ ಆರು ದಶಕದಲ್ಲಿ ಪ್ರಧಾನಿ ಸ್ಥಾನ ಬಿಟ್ಟು ಇನ್ನೆಲ್ಲವನ್ನು ಅನುಭವಿಸಿದ್ದು ಕಾಂಗ್ರೆಸ್ಸಿನಲ್ಲಿ. ಆದರೆ ಆ ಪಾರ್ಟಿಯ ಕಷ್ಟಕಾಲದಲ್ಲಿ ತಮ್ಮ ಕಡೆಗಾಲದಲ್ಲಿ, ಭಾರತದ ಸರ್ವನಾಶಕ್ಕೆ ಪಣತೊಟ್ಟಂತಿರುವ ಬಿಜೆಪಿಗೆ ಹೋಗಿ ಕುಳಿತು ಕಾಲ ಹಾಕುತ್ತಿರುವುದು ಅಕ್ಷಮ್ಯ ಅಪರಾಧ. ಅಷ್ಟಕ್ಕೂ ಬಿಜೆಪಿಗೆ ಹೋಗಿ ಕಾಲಹಾಕುವಂತಹ ಕೇಡುಗಾಲ ಕೃಷ್ಣರಿಗೇಕೆ ಬಂತು ಎಂಬುದು ನಿಗೂಢವಾಗುಳಿದಿದೆ. ಮಂಡ್ಯ ಹೈದರ ಪ್ರಕಾರ ಗಳಿಸಿದ್ದನ್ನು ದಕ್ಕಿಸಿಕೊಂಡು ಅಳಿಯನನ್ನು ಉಳಿಸಿಕೊಳ್ಳಲು ಬಿಜೆಪಿಗೆ ಹೋದರಂತೆ. ಆ ಬಿಜೆಪಿಯವರೊ ವೃದ್ಧರಿಗೆ ಗೌರವ ಕೊಡುವುದಿಲ್ಲವಂತೆ. ಆದರೂ ಕೃಷ್ಣ ಆಗಾಗ್ಗೆ ಸದ್ದು ಮಾಡುತ್ತ ಏನೇನೂ ಹೇಳುತ್ತ ಕಡೆಗೆ ತಾನೇನು ಮಹಾ ಪಕ್ಷಾಂತರ ಮಾಡಿಲ್ಲ, ಅಂತಹ ದೇವೇಗೌಡರೇ 80ರ ದಶಕದಲ್ಲಿ ಜನತಾದಳ ತೊರೆದು ಕಾಂಗ್ರೆಸ್ ಸೇರಲು ಬಂದಿದ್ದರು ಎಂದು ದಾಖಲಿಸಿದ್ದಾರಲ್ಲಾ ಥೂತ್ತೇರಿ.

ಹಲವು ಸಂಪುಟಗಳಲ್ಲಿ ತಮ್ಮ ರಾಜಕೀಯ ಜೀವನವನ್ನು ದಾಖಲಿಸಿರುವ ಕೃಷ್ಣ ಯಾರ ಮನಸ್ಸನ್ನು ನೋಯಿಸದ ವ್ಯಕ್ತಿಯಂತಲ್ಲಾ. ಆದ್ದರಿಂದ ರಾಜಕಾರಣದಲ್ಲಿನ ಕೆಲ ಗುಟ್ಟುಗಳನ್ನು ದಾಖಲಿಸುವುದರಲ್ಲಿ ಪ್ರಾಮಾಣಿಕತೆ ಕೊರತೆಯಿದೆ ಎಂಬುದು ದೇವೇಗೌಡರ ವಿಷಯದಲ್ಲಿ ಸಾಬೀತಾಗಿದೆ. ಮಾನ್ಯ ದೇವೇಗೌಡರು ಜನತಾದಳ ಬಿಟ್ಟು ಕಾಂಗ್ರೆಸ್ ಸೇರಲು ಬಂದಿದ್ದು ಎಂಬತ್ತರಲ್ಲಲ್ಲ. 1977ರಂದು ದೇಶದ ಮೇಲೆ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿದಾಗ ಯಾಕೋ ಜನತಾ ಪಕ್ಷ ನಿರ್ನಾಮವಾಗುತ್ತದೆಂದು ಭಾವಿಸಿ ಕಾಂಗ್ರೆಸ್ ಸೇರಿಬಿಡಲು ತೀರ್ಮಾನಿಸಿದ್ದರು. ವಿರೋಧ ಪಕ್ಷದ ತಮ್ಮ ಸ್ಥಾನವನ್ನು ಹೆಚ್.ಟಿ.ಕೃಷ್ಣಪ್ಪನವರಿಗೆ ವಹಿಸಿ ಜೈಲಿಂದ ಬಂದಕೂಡಲೇ ಕಾಂಗ್ರೆಸ್ ಸೇರೋಣ ಎಂದು ಇಬ್ರಾಹಿಂ ಸಮ್ಮುಖದಲ್ಲಿ ಹೇಳಿದ್ದವರು. ಜೈಲಿನಿಂದ ಬಂದನಂತರ ಮನಸ್ಸು ಬದಲಿಸಿದ್ದರು. ಆಗ ಪ್ರಾಮಾಣಿಕ ರಾಜಕಾರಣದ ದೆಸೆಯಿಂದ ಕಷ್ಟದಲ್ಲಿದ್ದ ಗೌಡರು ಗುಂಡೂರಾಯನ ಓಲೈಕೆಯಿಂದ ಚೇತರಿಸಿಕೊಂಡಿದ್ದರು. ಕಾಂಗೈ ಸೇರಲು ಹಾತೊರೆದ ಗೌಡರನ್ನ ಕಾಂಗ್ರೆಸ್ಸೇ ಪ್ರಧಾನಿ ಮಾಡಿತ್ತು. ಈಚೆಗೆ ಅವರ ಮಗನನ್ನ ಮುಖ್ಯಮಂತ್ರಿ ಮಾಡಿತ್ತಲ್ಲಾ ಥೂತ್ತೇರಿ.

ಕಾಂಗೈ ಸಪೋರ್ಟ್‍ನಿಂದ ಮಗ ಮುಖ್ಯಮಂತ್ರಿಯಾದ ಸಂದರ್ಭ ನೋಡಬೇಕಿತ್ತು. ಮಂಡ್ಯದ ಗೌಡರು ಸಾಲಸೂಲ ಮಾಡಿ ಮಗನ ಮದುವೆ ಮಾಡಿದಂತಿತ್ತು. ಅವರಿವರ ಸಹಾಯದಲ್ಲಿ ನಡೆಯುವ ಗೌಡರು, ಆ ದಿನ ಯಾರ ಸಹಾಯವೂ ಇಲ್ಲದೆ ಮದುವೆ ಮಂಟಪದಲ್ಲಿ ತುಟಿಬಿರಿದು ಅಡ್ಡಾಡುತ್ತಿದ್ದರು. ಅವರ ಮಗನ ಜೊತೆ ಹಸೆ ಏರಲು ಬಂದ ಕಾಂಗೈ ಹೆಣ್ಣು ಬಲಾಢ್ಯಳಾಗಿದ್ದಳು. ಸಾಕಷ್ಟು ಶ್ರೀಮಂತಿಕೆಯಿಂದಿದ್ದ ಆಕೆ ಕುಮಾರಣ್ಣನೊಡನೆ ದಾಂಪತ್ಯದಲ್ಲಿ ಇನ್ನಷ್ಟು ಬಲಾಢ್ಯಳಾಗುವ ಹವಣಿಕೆಯಲ್ಲಿದ್ದಳು. ಅವಳಪ್ಪ ಯಾಕೋ ಡಲ್ಲಾಗಿ ಎಲ್ಲೂ ಕಾಣಿಸಿಕೊಳ್ಳದೆ ಮೂಲೆಯಲ್ಲಿದ್ದ ಇತ್ತ ಭಾರತ ಕಂಡ ಅಪರೂಪದ ಈ ಮದುವೆಗೆ ಸೋನಿಯಾ, ರಾಹುಲ್, ಮಾಯಾವತಿ, ಮಮತಾ ಬ್ಯಾನರ್ಜಿ…., ಯಾದವ ಕುಲತಿಲಕರೆಲ್ಲಾ ನೆರೆದಿದ್ದರು. ಅದ್ದೂರಿ ಮದುವೆ ಜರುಗಿಹೋಯ್ತು. ಆದರೇನು ಕಾಂಗೈ ಕನ್ಯೆಯನ್ನ ನಿಭಾಯಿಸುವ ಶಕ್ತಿ ಗೌಡರ ಮಗನಿಗಿರಲಿಲ್ಲ. ಹಾಗೆ ನೋಡಿದರೆ ಅದು ಸರಿಯಾದ ಜೋಡಿಯಲ್ಲವೆಂದು ಜನರೇ ಹೇಳುತ್ತಿದ್ದರು. ನಿರೀಕ್ಷೆಯಂತೆ ಹದಿನಾಲ್ಕು ತಿಂಗಳಲ್ಲೇ ಡೈವೋರ್ಸು ನಡೆದುಹೋಯ್ತು. ಇದಕ್ಕೆ ಕಾರಣ ಮೋದಿ ಶಾ ಎಂಬ ಮನೆ ಮುರುಕರು. ಕಾಂಗೈ ಕನ್ಯೆಗೆ ಹೇಳಿದ್ದ ಚಾಡಿ ಮಾತುಗಳು ತಾವೇ ಮೇಲೆ ಬಿದ್ದು ಬಂದು ತಾವೇ ಡೈವೋರ್ಸ್ ಕೊಟ್ಟ ಕಾಂಗೈಯನ್ನ ಅಪ್ಪಮಕ್ಕಳು ಆಜನ್ಮವೈರಿಯಾಗಿ ಪರಿಗಣಿಸಿದ್ದಾರಂತಲ್ಲಾ ಥೂತ್ತೇರಿ.

ಬೆಂಗಳೂರಲ್ಲೊಂದು ಚಿತ್ರಕಲಾ ಸಂತೆ ಮೂಲೆಮೂಲೆಯಲ್ಲಿದ್ದ ಕುಂಚದ ಕಲಾವಿದರು. ತಾವು ರಚಿಸಿತಂದ ಕಲಾಕೃತಿಗಳನ್ನು ಗಾಂಧಿಭವನದ ಪಕ್ಕ ಹರಡಿಕೊಂಡು ನಿಂತಿದ್ದರು. ಸುಮಾರು ನಾಲ್ಕು ಲಕ್ಷ ಜನರು ವೀಕ್ಷಿಸಿದರು. ಈ ಚಿತ್ರಕಲಾ ಸಂತೆಯನ್ನು ಎಡೂರಪ್ಪ ರೈತರಿಗೆ ಅರ್ಪಿಸಿದರು. ಅಸಂಬದ್ಧ ಮತ್ತು ಅಧಿವೇಶನ ತೀರ್ಮಾನವೆಂದರೆ ಇದೆ. ಹಾಗೆ ನೋಡಿದರೆ ಬಿಜೆಪಿಗಳೇ ಅಸಂಬದ್ಧ ಚಿತ್ರಕಲೆಗೂ ರೈತರ ಬವಣೆಗೂ ಏನು ಸಂಬಂಧ ಕಳೆದ ಸರಕಾರ ರೈತರಿಗೆ ಕೊರೆಸಿಕೊಟ್ಟ ಬೋರ್‍ವೆಲ್‍ಗಳಿಗೆ ಪೈಪ್ ಕೊಡಲು ದುಡ್ಡಿಲ್ಲ ಎನ್ನುವ ಎಡೂರಪ್ಪ ಚಿತ್ರಕಲಾ ಸಂತೆಯನ್ನ ರೈತರಿಗೆ ಅರ್ಪಿಸಿದ್ದಾರೆ. ಈ ಅರ್ಪಣೆಯ ಹಿಂದೆ ಯಾವ ಘನ ಉದ್ದೇಶವೂ ಇಲ್ಲ. ರೈತರ ಕಣ್ಣಿಗೆ ಮಣ್ಣೆರಚಿ ಮುಂದೆ ಹೋಗುವುದಷ್ಟೇ ಕೆಲಸ. ಈ ಚಿತ್ರ ಸಂತೆಯಲ್ಲಿ ಯಾವನೋ ಚೆಡ್ಡಿಯೂ ಕಲಾವಿದನಾಗಿ ಮೋದಿ, ನಿರ್ಮಲಾ ಸೀತಾರಾಂ ಮತ್ತು ತೇಜಸ್ವಿ ಸೂರ್ಯನ ಚಿತ್ರಗಳನ್ನ ತಂದು ಮಡಗಿತ್ತು. ಚಿತ್ರಕಲೆಗೂ ಚೆಡ್ಡಿಗಳು ನುಗ್ಗಿದರೆ ಮುಂದೇನಾಗಬಹುದು ಎಂಬುದರ ಸೂಚನೆಯಿದು. ಜನ ಮಾತ್ರ ಚಿತ್ರಗಳ ತಂಟೆಗೆ ಹೋಗದೆ ಆಲೂಗಡ್ಡೆ ಚಿಪ್ಸು, ಪಾನಿ ಪೂರಿ, ಗೋಬಿ ಮಂಚೂರಿ, ಚುರುಮುರಿ ಕೊಂಡು ಹೇಗೆ ತಿನ್ನುತ್ತಿದ್ದರೆಂದರೆ ಅವನ್ನ ಕಂಡೇ ಇಲ್ಲವೇನೊ ಎನ್ನುವಂತೆ ಮುಕ್ಕುತ್ತಿದ್ದರಲ್ಲಾ ಥೂತ್ತೇರಿ.

ಜಗತ್ತಿನ ಸಮಸ್ಯೆಯಂತೆ ಒಡಮೂಡಿರುವ ಟ್ರಂಪ್ ಎಂಬ ಅಮೆರಿಕದ ಅಧ್ಯಕ್ಷ ಕಡೆಗೂ ಒಂದು ಅನಾಹುತವನ್ನು ಮಾಡೇಬಿಟ್ಟನಲ್ಲಾ. ಆತನೇನೂ ಇರಾನ್ ಸಾಬರ ಮೇಲೆ ಬಿದ್ದಿದ್ದಾನೆ. ಆದರೆ ಭಾರತದ ಟ್ರಂಪು ಭಾರತೀಯರ ಮೇಲೆ ಬಿದ್ದುಬಿಟ್ಟಿದ್ದಾನಲ್ಲಾ ಇದಕ್ಕೇನು ಹೇಳುವುದು. ಹಾಗೆ ನೋಡಿದರೆ ಬುದ್ಧಿಮಾಂದ್ಯ ಮೂರ್ಖರು ಏನಾದರೂ ಅನಾಹುತ ಮಾಡಿಯೇ ಮಾಡುತ್ತಾರೆ. ಎಂಬುದಕ್ಕೆ ಈ ಟ್ರಂಪ್‍ದ್ವಯರು ಭಯಂಕರ ಉದಾಹರಣೆ ಇರಾನ್‍ನ ಖಾಸಿಂ ಸುಲೇಮಾನ್ ಮೇಲೆ ದಾಳಿಮಾಡಿ ಸಾಯಿಸಿದ ಟ್ರಂಪ್ ಈ ಕೃತ್ಯಕ್ಕೆ ಭಾರತವನ್ನ ಎಳೆಯಲು ಆತ ಡೆಲ್ಲಿ ಉಡಾಯಿಸಲು ಸ್ಕೆಚ್ ಹಾಕಿದ್ದ. ಬ್ಲೂ ಪ್ರಿಂಟ್ ನನ್ನ ಬಳಿ ಇದೆ ಎಂದಿದ್ದಾನೆ. ಇತ್ತ ಅಧಿಕಾರಕ್ಕೆ ಬಂದಾಗಿನಿಂದಲೂ ಮೋದಿ ಮಾಡುತ್ತಿರುವುದು ಇಂತ ಅನಾಹುತಗಳನ್ನೆ. ಗುಜರಾತ್ ಚುನಾವಣೆಯಲ್ಲಿ ನಮ್ಮನ್ನ ಸೋಲಿಸಲು ಪಾಕಿಸ್ತಾನದಲ್ಲಿ ಸಂಚು ನಡೆದಿದೆ ಎನ್ನುತ್ತಾನೆ. ಅದಷ್ಟೇ ಅಲ್ಲ, ಸಂಸತ್ತಿನಲ್ಲಾಡುವ ಮಾತನ್ನ ಬೀದಿಯಲ್ಲಾಡುತ್ತಾನೆ. ಬೀದಿ ಮಾತನ್ನ ಸಂಸತ್ತಿನಲ್ಲಾಡುತ್ತಾನೆ. ಕರ್ನಾಟಕದಲ್ಲಾಡುವ ಮಾತನ್ನ ಜಾರ್ಖಂಡ್‍ನಲ್ಲಿ, ಡೆಲ್ಲಿಯಲ್ಲಾಡುವ ಮಾತನ್ನ ನ್ಯೂಯಾರ್ಕಿನಲ್ಲಿ ಹೀಗೆ ಎಲ್ಲೆಂದರಲ್ಲಿ ಬಾಯಿಗೆ ಬಂದದ್ದು ವದರುವ ಮೋದಿ, ಸಿದ್ದಗಂಗೆಯ ಎಳೆ ಮಕ್ಕಳ ಎದುರು ಪಾಕಿಸ್ತಾನದ ವಿಷಯ ಹೇಳಿ ಮುಗ್ಧ ಮಕ್ಕಳೇ ದಂಗಾಗುವಂತೆ ಮಾಡಿದ್ದಾನಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...