Homeಅಂತರಾಷ್ಟ್ರೀಯಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಅಮೆರಿಕದ ಏಜೆನ್ಸಿಯ (ಯುಎಸ್‌ಏಡ್‌) 2 ಸಾವಿರ ಉದ್ಯೋಗಿಗಳನ್ನು ಭಾನುವಾರ (ಫೆ.23) ವಜಾ ಮಾಡಿದ್ದು, ಇತರೆ ಸಾವಿರಾರು ನೌಕರರನ್ನು ರಜೆ ಮೇಲೆ ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ಮತ್ತು ವಿದೇಶಗಳಲ್ಲಿ ಸಾವಿರಾರು ಯುಎಸ್‌ಏಡ್ ಸಿಬ್ಬಂದಿಯನ್ನು ವಜಾಗೊಳಿಸಲು ಆಡಳಿತಕ್ಕೆ ಅವಕಾಶ ನೀಡಿದ ಫೆಡರಲ್ ನ್ಯಾಯಾಲಯದ ತೀರ್ಪಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ತಮ್ಮನ್ನು ವಜಾಗೊಳಿಸುವ ಸರ್ಕಾರದ ಯೋಜನೆಯ ಮೇಲಿನ ತಾತ್ಕಾಲಿಕ ತಡೆಯಾಜ್ಞೆಯನ್ನು ವಿಸ್ತರಿಸುವಂತೆ ಯುಎಸ್‌ಏಡ್ ಸಿಬ್ಬಂದಿ ಸಲ್ಲಿಸಿದ್ದ ಅರ್ಜಿಯನ್ನು ಯುಎಸ್‌ ಜಿಲ್ಲಾ ನ್ಯಾಯಾಧೀಶ ಕಾರ್ಲ್ ನಿಕೋಲ್ಸ್ ತಿರಸ್ಕರಿಸಿದ್ದರು. ಇದು ಆಡಳಿತದ ನಿರ್ಧಾರಕ್ಕೆ ಪರಿಣಾಮಕಾರಿಯಾಗಿ ಹಸಿರು ನಿಶಾನೆ ತೋರಿಸಿತ್ತು.

ನಿರ್ಣಾಯಕ ವಿಷಯಗಳ ಹುದ್ದೆಗಳು, ಪ್ರಮುಖ ನಾಯಕತ್ವದ ಹುದ್ದೆಗಳು ಅಥವಾ ವಿಶೇಷವಾಗಿ ಗೊತ್ತುಪಡಿಸಿದ ವಿಷಯಗಳನ್ನು ನಿರ್ವಹಿಸುವವರನ್ನು ಹೊರತುಪಡಿಸಿ, ಉಳಿದ ಎಲ್ಲಾ ನೇರ ನೇಮಕಾತಿ ಸಿಬ್ಬಂದಿಯನ್ನು ಆಡಳಿತಾತ್ಮಕ ರಜೆಯ ಮೇಲೆ ಇರಿಸಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡುವುದಾಗಿ ಈಚೆಗೆ ಘೋಷಿಸಿತ್ತು. ಇದರ ಬೆನ್ನಲ್ಲೇ ಯುಎಸ್‌ಏಡ್‌ನ ಉದ್ಯೋಗಿಗಳನ್ನು ಕಡಿತಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಟ್ರಂಪ್ ಅಧಿಕಾರವಹಿಸಿಕೊಂಡ ಬಳಿಕ ಆಡಳಿತಾತ್ಮಕವಾಗಿ ಹಲವು ಬದಲಾವಣೆಗಳು ಆಗಿವೆ. ಈ ಪೈಕಿ ಅಮೆರಿಕದಿಂದ ಹೊರ ಹೋಗುತ್ತಿರು ಆರ್ಥಿಕ ಸಹಾಯವನ್ನು ಕಡಿತಗೊಳಿಸುವುದರ ಬಗ್ಗೆ ಆಡಳಿತ ಪ್ರಮುಖವಾಗಿ ಒತ್ತು ನೀಡುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ, ಪ್ಯಾರಿಸ್ ಒಪ್ಪಂದ, ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಹೊರ ಬಂದಿರುವುದು ಇತ್ಯಾದಿ ಇದಕ್ಕೆ ಉದಾಹಣೆಗಳಾಗಿವೆ.

ಯುಎಸ್‌ಏಡ್ ವಿಚಾರದಲ್ಲಿ ಭಾರತ ಪ್ರಮುಖವಾಗಿ ತಳುಕು ಹಾಕಿಕೊಂಡಿದೆ. ಭಾರತದ ಚುನಾವಣೆಗೆ 21 ಮಿಲಿಯ ಡಾಲರ್ ಖರ್ಚು ಮಾಡಲಾಗಿದೆ ಎಂಬುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಟ್ರಂಪ್ ಆಡಳಿತ 4,600 ಯುಎಸ್‌ಏಡ್‌ ಉದ್ಯೋಗಿಗಳ ಕಡಿತ ಸೇರಿದಂತೆ ಅಮೆರಿಕದ ನಾಗರಿಕ ಸೇವೆ ಮತ್ತು ವಿದೇಶಾಂಗ ಸಚಿವಾಲಯದ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

5 ತಿಂಗಳುಗಳ ಬಳಿಕ ಹಿಜ್ಬೊಲ್ಲಾ ಮಾಜಿ ನಾಯಕ ನಸ್ರಲ್ಲಾ ಅಂತ್ಯಕ್ರಿಯೆ; ಸಾವಿರಾರು ಜನ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...