Homeಅಂತರಾಷ್ಟ್ರೀಯತನ್ನ ತಾಳಕ್ಕೆ ತಕ್ಕಂತೆ ಕುಣಿಯದ ಹಾರ್ವರ್ಡ್‌: ಅನುದಾನ ಸ್ಥಗಿತಗೊಳಿಸಿದ ಟ್ರಂಪ್ ಆಡಳಿತ

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ ಹಾರ್ವರ್ಡ್‌: ಅನುದಾನ ಸ್ಥಗಿತಗೊಳಿಸಿದ ಟ್ರಂಪ್ ಆಡಳಿತ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ ವಿಶ್ವಪ್ರಸಿದ್ದ ಹಾರ್ವರ್ಡ್‌ ವಿಶ್ವ ವಿದ್ಯಾಲಯದ 2.2 ಬಿಲಿಯನ್‌ ಡಾಲರ್‌ಗಿಂತಲೂ ಹೆಚ್ಚಿನ ಅನುದಾನ ಮತ್ತು 60 ಮಿಲಿಯನ್‌ಗಿಂತಲೂ ಹೆಚ್ಚಿನ ಮೌಲ್ಯದ ಒಪ್ಪಂದಗಳನ್ನು ಯುಎಸ್‌ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಶ್ವೇತಭವನದಿಂದ ಬಂದ ಅವಶ್ಯಕತೆಗಳ ಪಟ್ಟಿಯನ್ನು ಹಾರ್ವರ್ಡ್ ತಿರಸ್ಕರಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯಹೂದಿ ವಿರೋಧಿ ನೀತಿಯನ್ನು ಎದುರಿಸುವುದು ಮತ್ತು ವಿಶ್ವವಿದ್ಯಾನಿಲಯದ ಆಡಳಿತ, ಪ್ರವೇಶ ಮತ್ತು ನೇಮಕಾತಿ ಪದ್ಧತಿಗಳನ್ನು ಸುಧಾರಿಸುವ ಗುರಿಯನ್ನು ಇದು ಹೊಂದಿದೆ.

“ಹಾರ್ವರ್ಡ್‌ನ ಪ್ರತಿಕ್ರಿಯೆಯು ನಮ್ಮ ದೇಶದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ದೇಶ ವಿರೋಧಿ ಮನಸ್ಥಿತಿಗಳನ್ನು ಬಲಪಡಿಸುತ್ತದೆ” ಎಂದು ಯುಎಸ್ ಶಿಕ್ಷಣ ಇಲಾಖೆ ಹೇಳಿಕೆಯಲ್ಲಿ ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಶುಕ್ರವಾರ ಶ್ವೇತಭವನವು ಹೊಸ ಮತ್ತು ವಿಸ್ತೃತ ಬೇಡಿಕೆಗಳ ಪಟ್ಟಿಯನ್ನು ಕಳುಹಿಸಿದ್ದು, ಫೆಡರಲ್ ಸರ್ಕಾರದೊಂದಿಗೆ ಆರ್ಥಿಕ ಸಂಬಂಧವನ್ನು ಕಾಪಾಡಿಕೊಳ್ಳಲು ಹಾರ್ವರ್ಡ್ ಅವುಗಳನ್ನು ಪಾಲಿಸಬೇಕು ಎಂಬುವುದಾಗಿ ಎಚ್ಚರಿಸಲಾಗಿದೆ ಎಂದು ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ಸೋಮವಾರ (ಏ.14) ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ನಾವು ಅವರ ಪ್ರಸ್ತಾವಿತ ಒಪ್ಪಂದವನ್ನು ಸ್ವೀಕರಿಸುವುದಿಲ್ಲ ಎಂದು ನಮ್ಮ ಕಾನೂನು ಸಲಹೆಗಾರರ ​​ಮೂಲಕ ಆಡಳಿತಕ್ಕೆ ತಿಳಿಸಿದ್ದೇವೆ” ಎಂದು ಗಾರ್ಬರ್ ಹೇಳಿದ್ದಾರೆ. “ವಿಶ್ವವಿದ್ಯಾನಿಲಯವು ತನ್ನ ಸ್ವಾತಂತ್ರ್ಯವನ್ನು ಅಥವಾ ತನ್ನ ಸಾಂವಿಧಾನಿಕ ಹಕ್ಕುಗಳನ್ನು ಬಿಟ್ಟುಕೊಡುವುದಿಲ್ಲ” ಎಂದಿದ್ದಾರೆ.

ಹಾರ್ವರ್ಡ್ ವಿಶ್ವವಿದ್ಯಾಲಯವು ಯಹೂದಿ ವಿರೋಧಿ ಹೋರಾಟವನ್ನು ಲಘುವಾಗಿ ಪರಿಗಣಿಸಿಲ್ಲ. ಆದರೂ, ಸರ್ಕಾರದ ಹಲವು ಬೇಡಿಕೆಗಳು ಅತಿರೇಕದಿಂದ ಕೂಡಿವೆ. ಸರ್ಕಾರ ಮುಂದಿಟ್ಟಿರುವ ಕೆಲವು ಬೇಡಿಕೆಗಳು ಯಹೂದಿ ವಿರೋಧಿ ಹೋರಾಟವನ್ನು ತಡೆಯುವ ಗುರಿಯನ್ನು ಹೊಂದಿದ್ದರೂ, ಬಹುಪಾಲು ಬೇಡಿಕೆಗಳು ಹಾರ್ವರ್ಡ್‌ನ ‘ಬೌದ್ಧಿಕ ಪರಿಸ್ಥಿತಿಗಳ’ ನೇರ ಸರ್ಕಾರಿ ನಿಯಂತ್ರಣವನ್ನು ತೋರಿಸುತ್ತದೆ ಎಂದು ಗಾರ್ಬರ್ ಹೇಳಿದ್ದಾಗಿ ಬಿಬಿಸಿ ವರದಿ ಮಾಡಿದೆ.

ಗಾರ್ಬರ್ ಅವರ ಪತ್ರದ ಬೆನ್ನಲ್ಲೇ ಯುಎಸ್‌ ಶಿಕ್ಷಣ ಇಲಾಖೆಯು ನಿಧಿ ಸ್ಥಗಿತವನ್ನು ಘೋಷಿಸಿದೆ. “ಇತ್ತೀಚಿನ ವರ್ಷಗಳಲ್ಲಿ ಕ್ಯಾಂಪಸ್‌ಗಳನ್ನು ಕಾಡುತ್ತಿರುವ ಕಲಿಕೆಯ ಅಡ್ಡಿ ಸ್ವೀಕಾರಾರ್ಹವಲ್ಲ. ಯಹೂದಿ ವಿದ್ಯಾರ್ಥಿಗಳ ಮೇಲಿನ ಕಿರುಕುಳ ಅಸಹನೀಯ. ಗಣ್ಯ ವಿಶ್ವವಿದ್ಯಾನಿಲಯಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಮತ್ತು ತೆರಿಗೆದಾರರ ಬೆಂಬಲವನ್ನು ಪಡೆಯುವುದನ್ನು ಮುಂದುವರಿಸಲು ಬಯಸಿದರೆ ಅರ್ಥಪೂರ್ಣ ಬದಲಾವಣೆಗೆ ಬದ್ಧರಾಗುವ ಸಮಯ ಇದು” ಎಂದು ಶಿಕ್ಷಣ ಇಲಾಖೆ ಹೇಳಿದೆ.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಗಾಜಾ ಮೇಲಿನ ಇಸ್ರೇಲ್ ಆಕ್ರಮಣ ಮತ್ತು ಅದಕ್ಕೆ ಅಮೆರಿಕದ ಬೆಂಬಲದ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯಗಳು ಯಹೂದಿ ವಿರೋಧಿತ್ವವನ್ನು ಪ್ರವರ್ಧಮಾನಕ್ಕೆ ತರಲು ಅವಕಾಶ ಮಾಡಿಕೊಟ್ಟಿವೆ ಎಂದು ಶ್ವೇತಭವನ ವಾದಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹಾರ್ವರ್ಡ್ ಫೆಡರಲ್ ಹೂಡಿಕೆಯನ್ನು ಸಮರ್ಥಿಸುವ ಬೌದ್ಧಿಕ ಮತ್ತು ನಾಗರಿಕ ಹಕ್ಕುಗಳ ಷರತ್ತುಗಳನ್ನು ಪೂರೈಸಲು ವಿಫಲವಾಗಿದೆ ಎಂದು ಆಡಳಿತವು ಶುಕ್ರವಾರ ಬರೆದ ಪತ್ರದಲ್ಲಿ ತಿಳಿಸಿದೆ.

ಗಾಜಾ ಕದನವಿರಾಮ ಮಾತುಕತೆ: ಕತಾರ್‌ಗೆ ನಿಯೋಗ ಕಳುಹಿಸುತ್ತಿರುವುದಾಗಿ ಹೇಳಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...