Homeಅಂತರಾಷ್ಟ್ರೀಯಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

- Advertisement -
- Advertisement -

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ.

“ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ ಇಲ್ಲ” ಎಂದು ಈ-ಮೇಲ್‌ನಲ್ಲಿ ಹೇಳಲಾಗಿದೆ.

ವಾಯ್ಸ್‌ ಆಫ್‌ ಅಮೆರಿಕ ಸಂಸ್ಥೆಯ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ನೌಕರರು. ಅದರಲ್ಲೂ ಇಂಗ್ಲಿಷೇತರ ಭಾಷೆಗಳ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ಮೇಲೆ ನೇಮಕಗೊಂಡವರು. ಅವರ ನಿಖರ ಸಂಖ್ಯೆ ಎಷ್ಟು ಎಂಬುವುದು ಸದ್ಯಕ್ಕೆ ಗೊತ್ತಾಗಿಲ್ಲ.

ಹೆಚ್ಚಿನ ಗುತ್ತಿಗೆ ನೌಕರರು ಅಮೆರಿಕದ ನಾಗರಿಕರಲ್ಲ. ಅಂದರೆ, ಅವರು ಅಮೆರಿಕದಲ್ಲಿ ಉಳಿಯಲು ವೀಸಾಗಳಿಗಾಗಿ ತಮ್ಮ ಕೆಲಸವನ್ನು ಅವಲಂಬಿಸಿದ್ದರು. ಕೆಲಸ ಕಳೆದುಕೊಂಡರೆ ಅವರು ದೇಶ ಬಿಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕಾನೂನು ರಕ್ಷಣೆ ಹೊಂದಿರುವ, ವಾಯ್ಸ್‌ ಆಫ್ ಅಮೆರಿಕದ ಪೂರ್ಣಾವಧಿ ಸಿಬ್ಬಂದಿಯನ್ನು ತಕ್ಷಣ ವಜಾಗೊಳಿಸಲು ಸಾಧ್ಯವಿಲ್ಲ. ಆದರೆ, ಅವರೆಲ್ಲ ಆಡಳಿತಾತ್ಮಕ ರಜೆಯಲ್ಲಿದ್ದಾರೆ ಮತ್ತು ಕೆಲಸ ಮಾಡದಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಎರಡನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಸ್ಥಾಪಿಸಲಾದ ವಾಯ್ಸ್ ಆಫ್ ಅಮೆರಿಕ, ಮಾಧ್ಯಮ ಸ್ವಾತಂತ್ರ್ಯವಿಲ್ಲದ ದೇಶಗಳನ್ನು ತಲುಪುವ ಧ್ಯೇಯದೊಂದಿಗೆ ಪ್ರಪಂಚದಾದ್ಯಂತ 49 ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.

ವಾಯ್ಸ್‌ ಆಮೆರಿಕ ಸೇರಿದಂತೆ ಅಮೆರಿಕದ ನೆರವು ಪಡೆಯುತ್ತಿರುವ ರೆಡಿಯೊ ಫ್ರಿ ಯೂರೋಪ್, ರೆಡಿಯೊ ಲಿಬರ್ಟಿ, ರೆಡಿಯೊ ಫ್ರಿ ಏಷ್ಯಾ, ರೆಡಿಯೊ ಫರ್ಡಾ, ಅಲ್ ಹುರ್ರಾ ಮುಂತಾದ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನೂ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 31ರಿಂದ ಅನ್ವಯವಾಗುವಂತೆ ತನ್ನನ್ನು ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಸ್ವಾತಂತ್ರ್ಯ ಮತ್ತು ತಪ್ಪು ಮಾಹಿತಿಯ ಕುರಿತು ವರದಿ ಮಾಡುವ ವಾಯ್ಸ್ ಆಫ್‌ ಅಮೆರಿಕದ ವರದಿಗಾರ ಲಿಯಾಮ್ ಸ್ಕಾಟ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...