Homeಅಂತರಾಷ್ಟ್ರೀಯಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

- Advertisement -
- Advertisement -

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ.

“ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ ಇಲ್ಲ” ಎಂದು ಈ-ಮೇಲ್‌ನಲ್ಲಿ ಹೇಳಲಾಗಿದೆ.

ವಾಯ್ಸ್‌ ಆಫ್‌ ಅಮೆರಿಕ ಸಂಸ್ಥೆಯ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ನೌಕರರು. ಅದರಲ್ಲೂ ಇಂಗ್ಲಿಷೇತರ ಭಾಷೆಗಳ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ಮೇಲೆ ನೇಮಕಗೊಂಡವರು. ಅವರ ನಿಖರ ಸಂಖ್ಯೆ ಎಷ್ಟು ಎಂಬುವುದು ಸದ್ಯಕ್ಕೆ ಗೊತ್ತಾಗಿಲ್ಲ.

ಹೆಚ್ಚಿನ ಗುತ್ತಿಗೆ ನೌಕರರು ಅಮೆರಿಕದ ನಾಗರಿಕರಲ್ಲ. ಅಂದರೆ, ಅವರು ಅಮೆರಿಕದಲ್ಲಿ ಉಳಿಯಲು ವೀಸಾಗಳಿಗಾಗಿ ತಮ್ಮ ಕೆಲಸವನ್ನು ಅವಲಂಬಿಸಿದ್ದರು. ಕೆಲಸ ಕಳೆದುಕೊಂಡರೆ ಅವರು ದೇಶ ಬಿಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕಾನೂನು ರಕ್ಷಣೆ ಹೊಂದಿರುವ, ವಾಯ್ಸ್‌ ಆಫ್ ಅಮೆರಿಕದ ಪೂರ್ಣಾವಧಿ ಸಿಬ್ಬಂದಿಯನ್ನು ತಕ್ಷಣ ವಜಾಗೊಳಿಸಲು ಸಾಧ್ಯವಿಲ್ಲ. ಆದರೆ, ಅವರೆಲ್ಲ ಆಡಳಿತಾತ್ಮಕ ರಜೆಯಲ್ಲಿದ್ದಾರೆ ಮತ್ತು ಕೆಲಸ ಮಾಡದಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಎರಡನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಸ್ಥಾಪಿಸಲಾದ ವಾಯ್ಸ್ ಆಫ್ ಅಮೆರಿಕ, ಮಾಧ್ಯಮ ಸ್ವಾತಂತ್ರ್ಯವಿಲ್ಲದ ದೇಶಗಳನ್ನು ತಲುಪುವ ಧ್ಯೇಯದೊಂದಿಗೆ ಪ್ರಪಂಚದಾದ್ಯಂತ 49 ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.

ವಾಯ್ಸ್‌ ಆಮೆರಿಕ ಸೇರಿದಂತೆ ಅಮೆರಿಕದ ನೆರವು ಪಡೆಯುತ್ತಿರುವ ರೆಡಿಯೊ ಫ್ರಿ ಯೂರೋಪ್, ರೆಡಿಯೊ ಲಿಬರ್ಟಿ, ರೆಡಿಯೊ ಫ್ರಿ ಏಷ್ಯಾ, ರೆಡಿಯೊ ಫರ್ಡಾ, ಅಲ್ ಹುರ್ರಾ ಮುಂತಾದ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನೂ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 31ರಿಂದ ಅನ್ವಯವಾಗುವಂತೆ ತನ್ನನ್ನು ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಸ್ವಾತಂತ್ರ್ಯ ಮತ್ತು ತಪ್ಪು ಮಾಹಿತಿಯ ಕುರಿತು ವರದಿ ಮಾಡುವ ವಾಯ್ಸ್ ಆಫ್‌ ಅಮೆರಿಕದ ವರದಿಗಾರ ಲಿಯಾಮ್ ಸ್ಕಾಟ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...