Homeಅಂತರಾಷ್ಟ್ರೀಯಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

- Advertisement -
- Advertisement -

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ.

“ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ ಇಲ್ಲ” ಎಂದು ಈ-ಮೇಲ್‌ನಲ್ಲಿ ಹೇಳಲಾಗಿದೆ.

ವಾಯ್ಸ್‌ ಆಫ್‌ ಅಮೆರಿಕ ಸಂಸ್ಥೆಯ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ನೌಕರರು. ಅದರಲ್ಲೂ ಇಂಗ್ಲಿಷೇತರ ಭಾಷೆಗಳ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ಮೇಲೆ ನೇಮಕಗೊಂಡವರು. ಅವರ ನಿಖರ ಸಂಖ್ಯೆ ಎಷ್ಟು ಎಂಬುವುದು ಸದ್ಯಕ್ಕೆ ಗೊತ್ತಾಗಿಲ್ಲ.

ಹೆಚ್ಚಿನ ಗುತ್ತಿಗೆ ನೌಕರರು ಅಮೆರಿಕದ ನಾಗರಿಕರಲ್ಲ. ಅಂದರೆ, ಅವರು ಅಮೆರಿಕದಲ್ಲಿ ಉಳಿಯಲು ವೀಸಾಗಳಿಗಾಗಿ ತಮ್ಮ ಕೆಲಸವನ್ನು ಅವಲಂಬಿಸಿದ್ದರು. ಕೆಲಸ ಕಳೆದುಕೊಂಡರೆ ಅವರು ದೇಶ ಬಿಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕಾನೂನು ರಕ್ಷಣೆ ಹೊಂದಿರುವ, ವಾಯ್ಸ್‌ ಆಫ್ ಅಮೆರಿಕದ ಪೂರ್ಣಾವಧಿ ಸಿಬ್ಬಂದಿಯನ್ನು ತಕ್ಷಣ ವಜಾಗೊಳಿಸಲು ಸಾಧ್ಯವಿಲ್ಲ. ಆದರೆ, ಅವರೆಲ್ಲ ಆಡಳಿತಾತ್ಮಕ ರಜೆಯಲ್ಲಿದ್ದಾರೆ ಮತ್ತು ಕೆಲಸ ಮಾಡದಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಎರಡನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಸ್ಥಾಪಿಸಲಾದ ವಾಯ್ಸ್ ಆಫ್ ಅಮೆರಿಕ, ಮಾಧ್ಯಮ ಸ್ವಾತಂತ್ರ್ಯವಿಲ್ಲದ ದೇಶಗಳನ್ನು ತಲುಪುವ ಧ್ಯೇಯದೊಂದಿಗೆ ಪ್ರಪಂಚದಾದ್ಯಂತ 49 ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.

ವಾಯ್ಸ್‌ ಆಮೆರಿಕ ಸೇರಿದಂತೆ ಅಮೆರಿಕದ ನೆರವು ಪಡೆಯುತ್ತಿರುವ ರೆಡಿಯೊ ಫ್ರಿ ಯೂರೋಪ್, ರೆಡಿಯೊ ಲಿಬರ್ಟಿ, ರೆಡಿಯೊ ಫ್ರಿ ಏಷ್ಯಾ, ರೆಡಿಯೊ ಫರ್ಡಾ, ಅಲ್ ಹುರ್ರಾ ಮುಂತಾದ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನೂ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 31ರಿಂದ ಅನ್ವಯವಾಗುವಂತೆ ತನ್ನನ್ನು ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಸ್ವಾತಂತ್ರ್ಯ ಮತ್ತು ತಪ್ಪು ಮಾಹಿತಿಯ ಕುರಿತು ವರದಿ ಮಾಡುವ ವಾಯ್ಸ್ ಆಫ್‌ ಅಮೆರಿಕದ ವರದಿಗಾರ ಲಿಯಾಮ್ ಸ್ಕಾಟ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...