Homeಅಂತರಾಷ್ಟ್ರೀಯಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

- Advertisement -
- Advertisement -

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ.

“ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ ಇಲ್ಲ” ಎಂದು ಈ-ಮೇಲ್‌ನಲ್ಲಿ ಹೇಳಲಾಗಿದೆ.

ವಾಯ್ಸ್‌ ಆಫ್‌ ಅಮೆರಿಕ ಸಂಸ್ಥೆಯ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ನೌಕರರು. ಅದರಲ್ಲೂ ಇಂಗ್ಲಿಷೇತರ ಭಾಷೆಗಳ ಹೆಚ್ಚಿನ ಸಿಬ್ಬಂದಿ ಗುತ್ತಿಗೆ ಮೇಲೆ ನೇಮಕಗೊಂಡವರು. ಅವರ ನಿಖರ ಸಂಖ್ಯೆ ಎಷ್ಟು ಎಂಬುವುದು ಸದ್ಯಕ್ಕೆ ಗೊತ್ತಾಗಿಲ್ಲ.

ಹೆಚ್ಚಿನ ಗುತ್ತಿಗೆ ನೌಕರರು ಅಮೆರಿಕದ ನಾಗರಿಕರಲ್ಲ. ಅಂದರೆ, ಅವರು ಅಮೆರಿಕದಲ್ಲಿ ಉಳಿಯಲು ವೀಸಾಗಳಿಗಾಗಿ ತಮ್ಮ ಕೆಲಸವನ್ನು ಅವಲಂಬಿಸಿದ್ದರು. ಕೆಲಸ ಕಳೆದುಕೊಂಡರೆ ಅವರು ದೇಶ ಬಿಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕಾನೂನು ರಕ್ಷಣೆ ಹೊಂದಿರುವ, ವಾಯ್ಸ್‌ ಆಫ್ ಅಮೆರಿಕದ ಪೂರ್ಣಾವಧಿ ಸಿಬ್ಬಂದಿಯನ್ನು ತಕ್ಷಣ ವಜಾಗೊಳಿಸಲು ಸಾಧ್ಯವಿಲ್ಲ. ಆದರೆ, ಅವರೆಲ್ಲ ಆಡಳಿತಾತ್ಮಕ ರಜೆಯಲ್ಲಿದ್ದಾರೆ ಮತ್ತು ಕೆಲಸ ಮಾಡದಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಎರಡನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಸ್ಥಾಪಿಸಲಾದ ವಾಯ್ಸ್ ಆಫ್ ಅಮೆರಿಕ, ಮಾಧ್ಯಮ ಸ್ವಾತಂತ್ರ್ಯವಿಲ್ಲದ ದೇಶಗಳನ್ನು ತಲುಪುವ ಧ್ಯೇಯದೊಂದಿಗೆ ಪ್ರಪಂಚದಾದ್ಯಂತ 49 ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ.

ವಾಯ್ಸ್‌ ಆಮೆರಿಕ ಸೇರಿದಂತೆ ಅಮೆರಿಕದ ನೆರವು ಪಡೆಯುತ್ತಿರುವ ರೆಡಿಯೊ ಫ್ರಿ ಯೂರೋಪ್, ರೆಡಿಯೊ ಲಿಬರ್ಟಿ, ರೆಡಿಯೊ ಫ್ರಿ ಏಷ್ಯಾ, ರೆಡಿಯೊ ಫರ್ಡಾ, ಅಲ್ ಹುರ್ರಾ ಮುಂತಾದ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನೂ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 31ರಿಂದ ಅನ್ವಯವಾಗುವಂತೆ ತನ್ನನ್ನು ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಸ್ವಾತಂತ್ರ್ಯ ಮತ್ತು ತಪ್ಪು ಮಾಹಿತಿಯ ಕುರಿತು ವರದಿ ಮಾಡುವ ವಾಯ್ಸ್ ಆಫ್‌ ಅಮೆರಿಕದ ವರದಿಗಾರ ಲಿಯಾಮ್ ಸ್ಕಾಟ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...