Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...