Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...