Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...