Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...