Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...