Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...