Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...