Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...