Homeಮುಖಪುಟಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ - ಮೆರವ ಅರಸರು

ಟ್ರಮೋ ನಿಮ್ಮದು ಒಂದೇ ಬುದ್ದಿ : ಜನಸೇವಕರಲ್ಲ – ಮೆರವ ಅರಸರು

- Advertisement -
- Advertisement -

ದೇಶ ಬೆಲೆ ಏರಿಕೆಯ ಭಾರದಿಂದ ನಲುಗುತ್ತಿದೆ. ದಿನಬಳಕೆಯ ಪದಾರ್ಥಗಳ ಬೆಲೆ ಇಳಿಯುವ ಸೂಚನೆಗಳಂತು ಕಾಣುತ್ತಿಲ್ಲ. ಒಂದೇ ಬಾರಿಗೆ ಅಡುಗೆ ಅನಿಲದ ಬೆಲೆ ದಿಢೀರ್ 145 ರೂಪಾಯಿ ಹೆಚ್ಚಳವಾಯಿತು. ಅಂತಾರಾಷ್ಟ್ರ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೂ ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿ ಜನಸಾಮಾನ್ಯರ ಹೊರೆಯನ್ನು ಅಲ್ಪವಾದರೂ ಇಳಿಸುವ ಬುದ್ದಿಯೂ ಬರಲಿಲ್ಲ.. ಜನರು ಯಾವುದೇ ವಸ್ತುಗಳ ಬೆಲೆಗಳು ಹೆಚ್ಚಳವಾಗುತ್ತಿದ್ದರೂ ಮೌನವನ್ನೇ ಆಭರಣವಾಗಿ ಧರಿಸಿದ್ದಾರೆ ಎಂದು ನೀವು ಅಂದುಕೊಂಡಿದ್ದರೆ, ಅದು ನಿಮ್ಮ ಮೂರ್ಖತನ. ದೇಶದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳು ಮತ್ತು ಬೆಳವಣಿಗೆಗಳನ್ನು ಹತ್ತಿರದಿಂದಲೇ ಗಮನಿಸುತ್ತಿದ್ದಾರೆ. ಜನರ ಒಡಲೊಳಗೆ ಕುದಿ ಇದೆ. ಮುಖದಲ್ಲಿ  ನಗುವಿದೆ. ಯಾಕೆಂದರೆ ನೀವು ಮನುವಾದಿ ಮನಸ್ಥಿತಿಗಳ ಆರಾಧ್ಯ ದೈವವಲ್ಲವೇ?! ಅದಕ್ಕೆ!

ಪ್ರಜಗಳ ರಕ್ಷಣೆ ಪ್ರಭುವಿನ ಕೆಲಸ. ಪ್ರಜಗಳ ಕ್ಷೇಮವೇ ಪ್ರಧಾನ ಸೇವಕನ ಕೆಲಸವಾಗಬೇಕಿತ್ತು. ಆದರೆ ಅಂತಹ ಕೆಲಸ ನಡೆಯುತ್ತಿಲ್ಲ. ಪ್ರಜೆಗಳ ಮತದಿಂದ ಅಧಿಕಾರ ಹಿಡಿದ ಮೇಲೆ ಅರಸನ ಗೆಟಪ್ ಬಂದುಬಿಟ್ಟಿದೆ. ಈ ಗೆಟಪ್ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಅದೇ ಕಾರಣಕ್ಕೆ ಏನೋ,ಇದು ಪ್ರಜಾಪ್ರಭುತ್ವ ವ್ಯವಸ್ಥೆ,ಎಂಬುದನ್ನೇ ಮರೆತಿದ್ದೀರಿ. ಜನರ ಬೇಕು ಬೇಡಕಗಳು ನಿಮಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಹಿಂಜರಿತ, ಉದ್ದಿಮೆಗಳ ಮುಚ್ಚುವಿಕೆ, ಕೆಲಸ ಕಳೆದುಕೊಂಡವರ ಪಾಡು, ನಿರುದ್ಯೋಗಿಗಳ ಸ್ಥಿತಿಗತಿ, ರೈತರ ಅಳಲು, ರೈತರ ಆತ್ಮಹತ್ಯೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ, ಸ್ವಾಮಿನಾಥನ್ ಶಿಫಾರಸುಗಳ ಜಾರಿ ಇದ್ಯಾವುದರ ಬಗ್ಗೆಯೂ ಕಿಂಚಿತ್ತೂ ಯೋಚಿಸುತ್ತಿಲ್ಲ.

ಕೋಟ್ಯಂತರ ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಮನೆ ಸೇರಿಸಿದರು. ನಗರದಲ್ಲಿದ್ದವರು ಹಳ್ಳಿಗೆ ತೆರಳಿದರು. ಆ ಕಾರ್ಮಿಕರ ಪಾಡು ಹೇಳತೀರದು. ಜನರ ಕೈಯಲ್ಲಿ ಹಣವೇ ಇಲ್ಲ. ಬದುಕಿನ ಸಾಮಾನ್ಯ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಆಗುತ್ತಿಲ್ಲ. ಉದ್ಯೋಗಗಳಿಲ್ಲದೆ ಹಳ್ಳಿ ಸೇರಿದವರು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಅಕ್ಷರಶಃ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ದೊರೆಯಂತೆ ವರ್ತಿಸುತ್ತಿರುವ ನೀವು ತುಘಲಕ್ ದರ್ಬಾರ್ ಮಾಡುತ್ತಿದ್ದೀರಿ. ತಾನು ಮಾಡಿದ್ದೇ ಕಾನೂನು. ತಾನು ಹೇಳಿದಂತೆಯೇ ನಡೆಯಬೇಕು. ಇಲ್ಲದಿದ್ದವರು ಇಲ್ಲಿರಲಿಕ್ಕೂ ಅವಕಾಶವಿಲ್ಲ. ಸರ್ವಾಧಿಕಾರದ ಮನೋಭಾವ ನಿಮ್ಮದು. ನಿಮ್ಮನ್ನು ಆರಾಧಿಸುವ ಭಕ್ತಪಡೆ ಜನರ ನೇರ ಪ್ರಶ್ನೆಗಳನ್ನು ಎದುರಿಸಲು ಆಗದೆ ಮೊಂಡುವಾದಕ್ಕೆ ಇಳಿದಿದೆ. ದೈಹಿಕ ದಾಳಿಯನ್ನು ಮಾಡತೊಡಗಿದೆ. ಇದು ನಿಮಗೆ ಕಾಣಿಸುತ್ತಿಲ್ಲವೇ?

ಸ್ವಚ್ಚಭಾರತ್ ಅಂದಿರಿ ನಿತ್ಯವೂ ನಗರಗಳಲ್ಲಿ ಸ್ವಚ್ಛಗೊಳಿಸುವವರ ಪಾಡು ಹೇಳತೀರದಾಗಿದೆ. ಅವರ ವೇತನ ತಿಂಗಳಿಗೆ ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗ ಭದ್ತತೆ ಇಲ್ಲ. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದು ಖಾಯಂ ಮಾಡುವ ನಿರೀಕ್ಷೆಯಲ್ಲೇ ಕಾಲದೂಡುವಂತಾಗಿದೆ. ಸ್ವಚ್ಛತಾಕಾರರ ಆರೋಗ್ಯ ಹದಗೆಟ್ಟಿದೆ. ಮಾನವಹಕ್ಕು ಉಲ್ಲಂಘನೆಯಾಗುತ್ತಿದೆ. ಇನ್ನು ವಯಸ್ಸಿದ್ದಾಗಲೇ ಸಾವು ಬರುತ್ತಿದೆ. ಆದರೆ ಅವರ ಆರೋಗ್ಯದ ಕಡೆ ಸ್ವಚ್ಛ ಭಾರತ ಮುಖಮಾಡುವುದಿಲ್ಲ. ‘ಪೌರಕಾರ್ಮಿಕ’ನೆಂಬ ‘ನವಅಸ್ಪೃಶ್ಯತೆ’.ಮತ್ತೆ ಅಂಟಿಕೊಂಡಿದೆ. ಅವರ ಬದುಕೇ ಬೇರೊಬ್ಬರ ಚಾಕರಿ ಮಾಡುವುದು ಅನ್ನುವಂತಾಗಿದೆ. ಆಧುನಿಕ ತಂತ್ರಜ್ಞಾನ ಮುಂದುವರಿದಿದ್ದರೂ ಪೌರಕಾರ್ಮಿಕರಿಗೆ ಅದರ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ಡೆತ್ ಗಳು ದೇಶದಾದ್ಯಂತ ನಡೆಯುತ್ತಲೇ ಇವೆ. ಸ್ವಚ್ಛಭಾರತದಲ್ಲಿ ಅವರಿಗೆ ಅವಕಾಶವೇ ಇಲ್ಲ.

ಮುದ್ರಾ ಯೋಜನೆಯಡಿ 7 ಕೋಟಿ ಉದ್ಯೋ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದ್ದರೆ ಜನ ಸಮಸ್ಯೆಗಳನ್ನೇಕೆ ಎದುರಿಸುತ್ತಿದ್ದಾರೆ. ನವಅಗ್ರಹಾರಗಳು ಬಂದ ಮೇಲೆ ಬೀದಿಬದಿ ವ್ಯಾಪಾರಿಗಳೇ ಮಾಯವಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರ ಮಾಡುವವರನ್ನು ಸಣ್ಣ ಕಾರಣ ನೀಡಿ ಎತ್ತಂಗಡಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇದ್ದಾಗ ನೀವು ಉದ್ಯೋಗ ಸೃಷ್ಟಿಸಿದ್ದಾದರೂ ಎಲ್ಲಿ? ಜನರೇಕೆ ಉದ್ಯೋಗವಿಲ್ಲ ಎಂದು ಹೇಳುತ್ತಿರುವುದು? ಹಾಗಾದರೆ ನೀವು ಯಾರಿಗೆ ನೀಡಿದ್ದೀರಿ ಉದ್ಯೋಗ.

ಸ್ಲಂಗಳು ಬೆಳೆಯುತ್ತಿವೆ. ಅವುಗಳನ್ನು ಬೇರೆಯವರ ಕಣ್ಣಿಗೆ ಕಾಣದಂತೆ ಮುಚ್ಚಿಡುವ ಪ್ರಯತ್ನಗಳು ನಿರಂತರ ನಡೆಯುತ್ತಲೇ ಇವೆ. ಅಹಮದಾಬಾದ್ ಗೆ ಅಮೆರಿಕದ ಹುಚ್ಚು ದೊರೆ ಬಂದನೆಂಬ ಕಾರಣಕ್ಕೆ ತಡೆಗೋಡೆ ನಿರ್ಮಿಸಿದಿರಿ. ಅಲ್ಲಿದ್ದ ಬಡಕುಟುಂಬಗಳನ್ನಿ ನಿರ್ದಯವಾಗಿ ಎತ್ತಂಗಡಿ ಮಾಡಿದಿರಿ. ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅಮೆರಿಕಾದ ಹುಚ್ಚುದೊರೆಯ ಮುಂದೆ ತೋರಿಸಲು ಯತ್ನಿಸಿದಿರಿ. ಹುಚ್ಚುದೊರೆ ನಿಮ್ಮ ಎದುರೇ ನೀವು ಸದಾ ಪಠಿಸುವ ದೇಶವನ್ನೇ ಹೊಗಲಿದನೆಂಬ ಸುದ್ದಿ ನಿಮಗೆ ಕೇಳಿಸಲಿಲ್ಲವೇ? ನಿಮ್ಮದೇ ಗುಂಪಿನ ಮುಖಂಡನೊಬ್ಬ ನಿಮ್ಮ ಆರ್ಥಿಕತೆ ನೀತಿಗಳನ್ನು ಟೀಕಿಸುತ್ತಲೇ ಬರುತ್ತಿದ್ದಾರೆ. ಇದಕ್ಕೆ ನೀವು ಕಿವಿಗೊಡುವುದಿಲ್ಲವೇ? ಮನ್ ಕಿ ಬಾತ್ ನಿಂತು ಹೋಯಿತು. ಟ್ರಂಪ್ ಕಿ ಬಾತ್ ಶುರುವಾಯಿತು ನೀವು ಇಬ್ಬರು ಆದರೆ ನಿಮ್ಮ ಮನಸ್ಥಿತಿ ಒಂದೇ. ಯಾಕೆಂದರೆ ನೀವು ಟ್ರಮೋ!

ಹಳ್ಳಿ ಕಡೆ ಮಾತೊಂದಿದಿದೆ. ಮಾತ್ನಾಗೆ ಎಂಗಣ್ಣ ಗಂಟೆ ಹೊಡ್ದಂಗೆ, ಊಟ್ದಾಗೆ ಎಂಗೆ ಸೆಲಿಕೆಗೆ ತಿರಿವಿ ಹಾಕ್ದಂಗೆ,,ಕೆಲ್ಸದಾಗೆ ಎಂಗೆ ಗೊಣಗೊಣ ಕಣಣ್ಣ’ ಹಾಗೆ ನೀವು. ಮಾತಿನಲ್ಲಿ ಗಂಟೆಯ ಶಬ್ದ, ಊಟದಲ್ಲಿ ಅಣಬೆ ಸಾಂಬಾರೆ ಬೇಕು! ಕೆಲಸ ಮಾತ್ರ ಏನೂ ಆಗಿಲ್ಲ. ಹಿಂದಿನ ಯೋಜನೆಗಳ ಹೆಸರು ಅಳಿಸಿದಿರಿ. ಹೊಸ ನಾಮಕರಣ ಮಾಡಿದಿರಿ. ಇದು ಸರಿಯೇ ದೊರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...