Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...