Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...