Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...