Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...