Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...