Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...