Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...