Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....