Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...