Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...