Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...