Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...