Homeಅಂತರಾಷ್ಟ್ರೀಯಲಾಸ್‌ ಏಂಜಲೀಸ್‌ನಲ್ಲಿ ಮತ್ತಷ್ಟು ತೀವ್ರಗೊಂಡ ಪ್ರತಿಭಟನೆ: ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ ಟ್ರಂಪ್ ಆಡಳಿತ

ಲಾಸ್‌ ಏಂಜಲೀಸ್‌ನಲ್ಲಿ ಮತ್ತಷ್ಟು ತೀವ್ರಗೊಂಡ ಪ್ರತಿಭಟನೆ: ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ ಟ್ರಂಪ್ ಆಡಳಿತ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ವಲಸಿಗರ ಶೋಧ ಕಾರ್ಯಾಚರಣೆ ವಿರುದ್ದ ಭುಗಿಲೆದ್ದಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಹೆಚ್ಚುವರಿಯಾಗಿ 2000 ನ್ಯಾಷನಲ್‌ ಗಾರ್ಡ್ಸ್ ಮತ್ತು 700 ನೌಕಾಪಡೆ ಸಿಬ್ಬಂದಿಯನ್ನು ನಿಯೋಜಿಸಲು ಡೊನಾಲ್ಡ್ ಟ್ರಂಪ್ ಆಡಳಿತ ಸೋಮವಾರ ಆದೇಶಿಸಿದೆ.

ಟ್ರಂಪ್ ನಡೆಯನ್ನು ವಿರೋಧಿಸಿಕೊಂಡು ಬಂದಿರುವ ಕ್ಯಾಲಿಫೋರ್ನಿಯಾದ ಗವರ್ನರ್ ಗ್ಯಾವಿನ್ ನ್ಯೂಸಮ್, ಈ ಕ್ರಮ ಅಜಾಗರೂಕ ಮತ್ತು ನಮ್ಮ ಸೈನಿಕರಿಗೆ ಅಗೌರವ ಎಂದು ಸಾಮಾಜಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇದು ಸಾರ್ವಜನಿಕರ ಸುರಕ್ಷತೆಯ ಕ್ರಮವಲ್ಲ. ಬದಲಾಗಿ, ಅಪಾಯಕಾರಿ ಮತ್ತು ಅಧ್ಯಕ್ಷರ ದುರಹಂಕಾರದ” ಕ್ರಮ. ಟ್ರಂಪ್ ಅಮೆರಿಕದ ನೆಲಕ್ಕೇ 4000 ಸೈನಿಕರನ್ನು ಕಳುಹಿಸುವ ಮೂಲಕ ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ನ್ಯೂಸಮ್ ಟೀಕಿಸಿದ್ದಾರೆ.

ದೇಶದಲ್ಲಿ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾದ ಲಾಸ್‌ ಏಂಜಲೀಸ್‌ಗೆ ಟ್ರಂಪ್ ಶನಿವಾರ 2,000 ನ್ಯಾಷನಲ್ ಗಾರ್ಡ್ಸ್ ಸಿಬ್ಬಂದಿ ನಿಯೋಜಿಸಿದ್ದಾರೆ. ಈ ಪೈಕಿ ಭಾನುವಾರ ಸುಮಾರು 300 ಸಿಬ್ಬಂದಿ ಫೆಡರಲ್ ಕಟ್ಟಡಗಳು ಮತ್ತು ಅಧಿಕಾರಿಗಳನ್ನು ರಕ್ಷಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ನ್ಯಾಷನಲ್ ಗಾರ್ಡ್ಸ್‌ಗೆ ಸಹಾಯ ಮಾಡಲು ಸೋಮವಾರ 700 ಯುಎಸ್ ಮೆರೈನ್ ಕಾರ್ಪ್ಸ್ (ಯುಎಸ್ಎಂಸಿ)ಸಿಬ್ಬಂದಿಯನ್ನು ಲಾಸ್‌ ಏಂಜಲೀಸ್‌ಗೆ ಕಳುಹಿಸಲಾಗಿದೆ.

ಟ್ರಂಪ್ ಪ್ರತಿಭಟನೆ ಹತ್ತಿಕ್ಕಲು ಗಾರ್ಡ್ಸ್ ಬಳಸುತ್ತಿರುವುದರ ವಿರುದ್ದ ಕ್ಯಾಲಿಫೋರ್ನಿಯಾ ಮೊಕದ್ದಮೆ ಹೂಡಿದೆ ಎಂದು ವರದಿಯಾಗಿದೆ. ನಾಲ್ಕನೇ ದಿನವಾದ ಸೋಮವಾರ ಕೂಡ ಲಾಸ್‌ ಏಂಜಲೀಸ್‌ನ ಬೀದಿಗಳಲ್ಲಿ ವಲಸಿಗರ ವಿರುದ್ಧದ ಕಾರ್ಯಾಚರಣೆ ವಿರೋಧಿಸಿ ಪ್ರತಿಭಟನೆ ನಡೆದಿದೆ.

ಸೋಮವಾರದ ಪ್ರತಿಭಟನೆಗಳು ಅಷ್ಟೇನೂ ಗದ್ದಲದಿಂದ ಕೂಡಿರಲಿಲ್ಲ. ಸಾವಿರಾರು ಜನರು ಸಿಟಿ ಹಾಲ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಶಾಂತಿಯುತವಾಗಿ ಭಾಗವಹಿಸಿದ್ದರು ಮತ್ತು ನಗರದಾದ್ಯಂತ ಕೆಲಸದ ಸ್ಥಳಗಳ ಮೇಲೆ ದಾಳಿ ನಡೆಸಿದ ನಂತರ ಕೆಲವು ವಲಸಿಗರನ್ನು ಬಂಧಿಸಲಾಗಿರುವ ಬಂಧನ ಕೇಂದ್ರವನ್ನು ಒಳಗೊಂಡಿರುವ ಫೆಡರಲ್ ಸಂಕೀರ್ಣದ ಹೊರಗೆ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.

ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...