Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...