Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...