Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...