Homeಮುಖಪುಟ'ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ...

‘ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’: ರಾಹುಲ್ ಗಾಂಧಿ

- Advertisement -
- Advertisement -

“ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ದೇಶನ ನೀಡಿದ ಐದು ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ  ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಹೇಳಿದ್ದಾರೆ.

ಬಿಹಾರದ ಮುಝಪ್ಪರ್‌ಪುರ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು. ‘ವೋಟರ್ ಅಧಿಕಾರ್’ ಯಾತ್ರೆಯ ಭಾಗವಾಗಿ ನಡೆದ ರ‍್ಯಾಲಿಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾದ ಡಿಎಂಕೆಯ ಎಂ.ಕೆ ಸ್ಟಾಲಿನ್ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಿದ್ದರು.

“ಟ್ರಂಪ್ ಇವತ್ತು ಏನು ಹೇಳಿದ್ದಾರೆ ನಿಮಗೆ ಗೊತ್ತಾ? ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದಾಗ, ಅವರು ಮೋದಿಯವರಿಗೆ ಕರೆ ಮಾಡಿ 24 ಗಂಟೆಗಳ ಒಳಗೆ ಯುದ್ದ ನಿಲ್ಲಿಸುವಂತೆ ಸ್ಪಷ್ಟವಾಗಿ ಹೇಳಿದ್ದರು ಮತ್ತು ಮೋದಿ ತಕ್ಷಣವೇ ಅದನ್ನು ಪಾಲಿಸಿದ್ದರು ಎಂದಿದ್ದಾರೆ. ಸಂಘರ್ಷ ನಿಲ್ಲಿಸಲು ಮೋದಿಯವರಿಗೆ ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು. ಆದರೆ, ಮೋದಿ ಅದನ್ನು 5 ಗಂಟೆಗಳಲ್ಲಿ ಪಾಲಿಸಿದರು” ಎಂದಿದ್ದಾರೆ.

ಟ್ರಂಪ್ ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿ ವಿಡಿಯೋ ಉಲ್ಲೇಖಿಸಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ದ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇದನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ.

ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ನೇರ ಮಾತುಕತೆ ನಡೆದ ನಂತರ ಮೇ ತಿಂಗಳಲ್ಲಿ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

“ಟ್ರಂಪ್ ಹೇಳಿದ್ದನ್ನು ಮಾಧ್ಯಮಗಳು ನಿಮಗೆ ತೋರಿಸುವುದಿಲ್ಲ. ಏಕೆಂದರೆ, ಅವರು ಮೋದಿ ಮತ್ತು ಅವರ ಸ್ನೇಹಪರ ವ್ಯವಹಾರ ಉದ್ಯಮಿಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಹೊರತು, ನನ್ನಂತಹ ಜನರು, ಸ್ಟಾಲಿನ್ ಅಥವಾ ತೇಜಸ್ವಿಯವರ ಬಗ್ಗೆ ಅಲ್ಲ” ಎಂದು ರಾಹುಲ್ ಗಾಂಧಿ ಮಾಧ್ಯಮಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

“ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ‘ಗುಜರಾತ್ ಮಾದರಿ’ ಎಂದು ಹೇಳುತ್ತಿದ್ದರು. ಮತಗಳ್ಳತನವನ್ನೇ ಅವರು ಗುಜರಾತ್ ಮಾದರಿ ಎಂದಿರುವುದು. ಗುಜರಾತ್‌ನಿಂದಲೇ ಬಿಜೆಪಿ ಮತಗಳನ್ನು ಕದಿಯಲು ಶುರು ಮಾಡಿದೆ. ಮೋದಿ-ಅಮಿತ್‌ ಶಾ ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಕದಿಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರದ ಮತದಾರರ ಪಟ್ಟಿಯಿಂದ ‘ಸಾವನ್ನಪ್ಪಿದವರು, ಸ್ಥಳಾಂತರಗೊಂಡವರು ಮತ್ತು ಒಂದಕ್ಕಿಂತ ಹೆಚ್ಚು ಬಾರಿ ನೋಂದಣಿಗೊಂಡವರು’ ಎಂದು ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿದ್ದಕ್ಕೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಬಿಹಾರದಲ್ಲಿ ಸಾವಿರಾರು ಜನರು ತಮ್ಮ ಹೆಸರುಗಳನ್ನು ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ನಮಗೆ ದೂರು ನೀಡಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಅನೇಕ ಜೀವಂತ ಜನರನ್ನು ಸತ್ತಂತೆ ತೋರಿಸಲಾಗಿದೆ (ಕರಡು ಪಟ್ಟಿಯಲ್ಲಿ)” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಚುನಾವಣಾ ಆಯೋಗವು ಶ್ರೀಮಂತರಲ್ಲದ ದಲಿತರು, ಒಬಿಸಿಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಹೆಸರುಗಳನ್ನು ಅಳಿಸುತ್ತಿದೆ. ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಸಾಮಾನ್ಯ ಜನರ ಧ್ವನಿಯನ್ನು ಕೇಳಲು ಇಷ್ಟಪಡುವುದಿಲ್ಲ. ಈ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತ್ತು ಆಪಾದಿತ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ 15 ದಿನಗಳ ‘ವೋಟರ್ ಅಧಿಕಾರ್’ ಯಾತ್ರೆ ಕೈಗೊಂಡಿದ್ದಾರೆ. ಯಾತ್ರೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ.

ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...