Homeಅಂತರಾಷ್ಟ್ರೀಯಟ್ರಂಪ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು: ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪ

ಟ್ರಂಪ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು: ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪ

ನವೆಂಬರ್‌ನಲ್ಲಿ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಲು ಪ್ರಯತ್ನಿಸುತ್ತಿರುವ ಟ್ರಂಪ್ ವಿರುದ್ಧದ 24ಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪಗಳಲ್ಲಿ ಇದೂ ಒಂದಾಗಿದೆ.

- Advertisement -
- Advertisement -

1997 ರ ಸೆಪ್ಟೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಮೇಲೆ ಲೈಂಗಿಕ ಹಲ್ಲೆ ಮಾಡಿದ್ದಾರೆ ಎಂದು ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪಿಸಿದ್ದಾರೆ. ಟ್ರಂಪ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ.

ನ್ಯೂಯಾರ್ಕ್‌ನಲ್ಲಿ ನಡೆದ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ತಾನು 24 ವರ್ಷದವಳಿದ್ದಾಗ ಟ್ರಂಪ್ ಆಮಿ ಡೋರಿಸ್ ಮೇಲೆ ಹಲ್ಲೆ ನಡೆಸಿದ್ದರು. ನವೆಂಬರ್‌ನಲ್ಲಿ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಲು ಪ್ರಯತ್ನಿಸುತ್ತಿರುವ ಟ್ರಂಪ್ ವಿರುದ್ಧದ 24ಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪಗಳಲ್ಲಿ ಇದೂ ಒಂದಾಗಿದೆ.

2016 ರ ಅಧ್ಯಕ್ಷೀಯ ಚುನಾವಣೆಗೆ ಮುಂಚೆಯೇ, ಟ್ರಂಪ್ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋವೊಂದು ಸೊರಿಕೆಯಾಗಿತ್ತು. ಅದರಲ್ಲಿ, ಟ್ರಂಪ್ ಅವರು ಮಹಿಳೆಯ ಅನುಮತಿಗಾಗಿ ಕಾಯದೆ ಆಕೆಯ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದರ ಕುರಿತು ಮಾತನಾಡಿದ್ದರು. ಇದಾದ ನಂತರ ಅವರು ನೀಡಿದ್ದ ಹೇಳಿಕೆಗೆ ಕ್ಷಮೆಯಾಚಿಸಿದ್ದರು.

ಡೊನಾಲ್ಡ್ ಟ್ರಂಪ್ ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಕುರಿತು ಸಂಪೂರ್ಣ ವಿವರವನ್ನು ಆಮಿ ಡೋರಿಸ್ ತಿಳಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

ಟ್ರಂಪ್ ತಮ್ಮ ವಕೀಲರ ಮೂಲಕ ಈ ಘಟನೆಯನ್ನು ಬಲವಾಗಿ ನಿರಾಕರಿಸಿದ್ದಾರೆ. ಯುಎಸ್ ಓಪನ್‌ನಲ್ಲಿ ಈ ಘಟನೆ ನಡೆದಿದ್ದರೆ, ಅದಕ್ಕೆ ಅನೇಕ ಸಾಕ್ಷಿಗಳು ಇರುತ್ತಿತ್ತು ಎಂದು ಅವರ ವಕೀಲರು ವಾದಿಸಿದ್ದಾರೆ.

“2016 ರಲ್ಲಿಯೂ ಇಂತಹ ಆರೋಪಗಳು ಬರುತ್ತಿದ್ದುದನ್ನು ಗಮನಿಸಿದ್ದೆ. ಆದರೆ ನನ್ನ ಕುಟುಂಬವನ್ನು ರಕ್ಷಿಸುವ ಸಲುವಾಗಿ ನಾನು ಈ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ ಎಂದು ಹೇಳಿದ್ದರು.

15 ತಿಂಗಳ ಹಿಂದೆ ಆಮಿ ಡೋರಿಸ್, ದಿ ಗಾರ್ಡಿಯನ್ ಜೊತೆ ಮಾತನಾಡಿದ್ದರು. ಆದರೆ ಆ ಸಮಯದಲ್ಲಿ ಸಾರ್ವಜನಿಕವಾಗಿ ಬಹಿರಂಗಗೊಳಿಸಲು ಇಷ್ಟವಿರಲಿಲ್ಲ ಎಂದು ಸ್ಕ್ರಾಲ್.ಇನ್ ತಿಳಿಸಿದೆ.

ಟ್ರಂಪ್ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕಾನೂನು ಸಲಹೆಗಾರ ಜೆನ್ನಾ ಎಲ್ಲಿಸ್, ಡೋರಿಸ್ ಅವರ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಈ ಆಧಾರರಹಿತ ಆರೋಪವು ಖಂಡಿತ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...