Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...