Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...