Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...