Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...