Homeಅಂತರಾಷ್ಟ್ರೀಯಉದ್ವಿಗ್ನತೆ ಹೆಚ್ಚಾದರೆ ಟ್ರಂಪ್ ಭಾರತದ ಪರವಾಗಿ ನಿಲ್ಲತಾರೆಂದು ಖಾತರಿಯಿಲ್ಲ: ಅಮೆರಿಕಾದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

ಉದ್ವಿಗ್ನತೆ ಹೆಚ್ಚಾದರೆ ಟ್ರಂಪ್ ಭಾರತದ ಪರವಾಗಿ ನಿಲ್ಲತಾರೆಂದು ಖಾತರಿಯಿಲ್ಲ: ಅಮೆರಿಕಾದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

- Advertisement -
- Advertisement -

ಚೀನಾ-ಭಾರತದ ಗಡಿ ಉದ್ವಿಗ್ನತೆ ಹೆಚ್ಚಾದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ವಿರುದ್ಧ ಭಾರತವನ್ನು ಬೆಂಬಲಿಸುತ್ತಾರೆ ಎಂಬ ಖಾತರಿಯಿಲ್ಲ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ.

ಚೀನಾ ತನ್ನ ಗಡಿಯ ಸುತ್ತಲೂ ಯುದ್ಧದ ಹಪಾಹಪಿಯಲ್ಲಿ ವರ್ತಿಸುತ್ತಿದೆ, ಖಂಡಿತವಾಗಿಯೂ ಪೂರ್ವ ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿ, ಜಪಾನ್, ಭಾರತ ಮತ್ತು ಇತರರೊಂದಿಗಿನ ಸಂಬಂಧಗಳು ಕ್ಷೀಣಿಸಿವೆ ಎಂದು ಬೋಲ್ಟನ್ WION TV ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಚೀನಾ ವಿರುದ್ಧ ಭಾರತದ ಪರವಾಗಿ ಟ್ರಂಪ್ ಎಷ್ಟು ದೂರ ಬರಲು ಸಿದ್ಧರಿದ್ದಾರೆ? ಅವರು ಯಾವ ಮಾರ್ಗದಲ್ಲಿ ಹೋಗುತ್ತಾರೆಂದು ನನಗೆ ಮಾತ್ರವಲ್ಲ ಅವರಿಗೂ ತಿಳಿದಿಲ್ಲ. ಏಕೆಂದರೆ ಅವರು ಚೀನಾದೊಂದಿಗಿನ ವ್ಯಾಪಾರದ ಮೂಲಕ ಭೂ ಕಾರ್ಯತಂತ್ರದ ಸಂಬಂಧವನ್ನು ಎದುರು ನೋಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಜಾನ್ ಬೋಲ್ಟನ್ ಹೇಳಿದ್ದಾರೆ.

“ನವೆಂಬರ್ ಚುನಾವಣೆಯ ನಂತರ ಟ್ರಂಪ್ ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ… ಅವರು ಚೀನಾದೊಂದಿಗೆ ದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಾರೆ. ಭಾರತ-ಚೀನಾ ನಡುವೆ ನಿರ್ಣಾಯಕ ವಿಷಯಗಳು ನಡೆಯುತ್ತಿರಬೇಕಾದರೆ, ಅವರು ಎಲ್ಲಿರುತ್ತಾರೆ ಎಂದು ನನಗೆ ಖಚಿತವಿಲ್ಲ” ಎಂದು ಅವರು ಹೇಳಿದ್ದಾರೆ.

ಭಾರತ-ಚೀನಾ ನಡುವೆ ನಡೆಯುತ್ತಿರುವ ದಶಕಗಳ ಘರ್ಷಣೆಗಳ ಇತಿಹಾಸದ ಬಗ್ಗೆ ಟ್ರಂಪ್‌ಗೆ ಏನೂ ತಿಳಿದಿಲ್ಲ ಎಂದು ಬೋಲ್ಟನ್ ಹೇಳಿದ್ದಾರೆ.

ಟ್ರಂಪ್‌ಗೆ ಇದರ ಬಗ್ಗೆ ಅಲ್ಪ ಮಾಹಿತಿ ಇರಬಹುದಾದರು ಇತಿಹಾಸದ ಬಗ್ಗೆ ನಿಜವಾಗಿಯೂ ಅವರಿಗೆ ತಿಳಿದಿಲ್ಲ ಎಂದು ಟ್ರಂಪ್ ಆಡಳಿತದಲ್ಲಿ ಏಪ್ರಿಲ್ 2018 ರಿಂದ ಸೆಪ್ಟೆಂಬರ್ 2019 ರವರೆಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಗಿದ್ದ ಬೋಲ್ಟನ್ ಹೇಳಿದ್ದಾರೆ.

ಕಳೆದ ಎಂಟು ವಾರಗಳಿಂದ ಪೂರ್ವ ಲಡಾಖ್‌ನ ಅನೇಕ ಸ್ಥಳಗಳಲ್ಲಿ ಭಾರತ-ಚೀನಾದ ಸೈನ್ಯ ಮುಖಾಮುಖಯಾಗಿದ್ದವು. ಅಲ್ಲದೆ ಗಾಲ್ವನ್‌ನಲ್ಲಿ ನಡೆದ ಘರ್ಷಣೆಯಿಂದ  20 ಭಾರತೀಯ ಸೇನಾ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದರು.

ಈ ಪ್ರದೇಶದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಉಭಯ ದೇಶ ಕಳೆದ ಕೆಲವು ವಾರಗಳಲ್ಲಿ ಹಲವಾರು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳನ್ನು ನಡೆಸಿದೆ.


ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...