Homeಅಂತರಾಷ್ಟ್ರೀಯಗಾಜಾ ಕುರಿತು ಆಘಾತಕಾರಿ ಹೇಳಿಕೆ ನೀಡಿದ ಟ್ರಂಪ್

ಗಾಜಾ ಕುರಿತು ಆಘಾತಕಾರಿ ಹೇಳಿಕೆ ನೀಡಿದ ಟ್ರಂಪ್

- Advertisement -
- Advertisement -

ವಾಷಿಂಗ್ಟನ್: ರಾಜತಾಂತ್ರಿಕ ಪ್ರಯತ್ನಗಳ ಹೊರತಾಗಿಯೂ ಗಾಜಾ ಕದನ ವಿರಾಮ ನಿಲ್ಲುವುದು ಅನುಮಾನವೆಂದು ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಿಸಿದ್ದಾರೆ.

ಎರಡೂ ಕಡೆಯವರು ಒಪ್ಪಂದವನ್ನು ಕಾಯ್ದುಕೊಳ್ಳುತ್ತಾರೆಯೇ ಮತ್ತು ಒಪ್ಪಂದದಲ್ಲಿ ಮುಂದುವರಿಯುತ್ತಾರೆಯೇ ಎಂದು ಶ್ವೇತಭವನಕ್ಕೆ ಹಿಂತಿರುಗುತ್ತಿದ್ದಂತೆ ವರದಿಗಾರರೊಬ್ಬರು ಕೇಳಿದಾಗ, ಟ್ರಂಪ್, “ನನಗೆ ವಿಶ್ವಾಸವಿಲ್ಲ” ಎಂದು ಹೇಳಿದ್ದಾರೆ.

“ಅದು ನಮ್ಮ ಯುದ್ಧವಲ್ಲ; ಇದು ಅವರ ಯುದ್ಧ. ಆದರೆ ನನಗೆ ವಿಶ್ವಾಸವಿಲ್ಲ” ಎಂದು ಟ್ರಂಪ್ ತಿಳಿಸಿದ್ದಾರೆ.

ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲೆ ಅಭೂತಪೂರ್ವ ದಾಳಿಯೊಂದಿಗೆ ಪ್ರಾರಂಭವಾದ ಯುದ್ಧದಲ್ಲಿ ಹಮಾಸ್ “ದುರ್ಬಲಗೊಂಡಿದೆ” ಎಂದು ನಂಬಿದ್ದೆ. ನಾನು ಗಾಜಾದ ಚಿತ್ರವನ್ನು ನೋಡಿದೆ. ಗಾಜಾ ಒಂದು ಬೃಹತ್ ಧ್ವಂಸ ಸ್ಥಳದಂತಿದೆ ಎಂದು ಟ್ರಂಪ್ ಹೇಳಿದ್ದಾರೆ.

ಉದ್ಯಮಿಯಾಗಿದ್ದು ಜನಪ್ರಿಯ ರಾಜಕಾರಣಿಯಾಗಿ ಮಾರ್ಪಟ್ಟಿರುವ ಟ್ರಂಪ್, ಕದನ ವಿರಾಮ ಯೋಜನೆ ಮುಂದುವರೆದರೆ ಗಾಜಾದಲ್ಲಿ “ಅದ್ಭುತ” ಪುನರ್ನಿರ್ಮಾಣವನ್ನು ನೋಡಬಹುದು. ಇದು ಸಮುದ್ರದ ಮೇಲೆ ಅದ್ಭುತವಾದ ಸ್ಥಳ– ಅತ್ಯುತ್ತಮ ಹವಾಮಾನ. ನಿಮಗೆ ತಿಳಿದಿದೆ, ಎಲ್ಲವೂ ಚೆನ್ನಾಗಿದೆ. ಇದರೊಂದಿಗೆ ಕೆಲವು ಸುಂದರವಾದ ಕೆಲಸಗಳನ್ನು ಮಾಡಬಹುದು” ಎಂದು ಅವರು ತಿಳಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಭಾನುವಾರ ಕದನ ವಿರಾಮ ಒಪ್ಪಂದವನ್ನು ಜಾರಿಗೆ ತರಲು ಪ್ರಾರಂಭಿಸಿದವು, ಇದರಲ್ಲಿ ಒತ್ತೆಯಾಳುಗಳು ಮತ್ತು ಕೈದಿಗಳ ವಿನಿಮಯವೂ ಸೇರಿತ್ತು. ಈ ಯೋಜನೆಯನ್ನು ಮೂಲತಃ ಈ ಹಿಂದಿನ ಅಧ್ಯಕ್ಷ ಜೋ ಬಿಡೆನ್ ಮೇ ತಿಂಗಳಲ್ಲಿ ರೂಪಿಸಿದ್ದರು ಮತ್ತು ಬಿಡೆನ್ ಮತ್ತು ಟ್ರಂಪ್ ರಾಯಭಾರಿಗಳು ಅಸಾಮಾನ್ಯ ಜಂಟಿ ರಾಜತಾಂತ್ರಿಕತೆಯ ನಂತರ ಅದನ್ನು ಜಾರಿಗೆ ತರಲಾಗಿದೆ.

ಆಯ್ಕೆ ವಿಷಯ ಬಂದಾಗ ಟ್ರಂಪ್ ಅವರು ಇಸ್ರೇಲ್ ಅನ್ನು ದೃಢವಾಗಿ ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಅವರ ಮೊದಲ ಕಾರ್ಯಗಳಲ್ಲಿ ಒಂದಾದ, ಪ್ಯಾಲೆಸ್ಟೀನಿಯನ್ನರ ವಿರುದ್ಧದ ದಾಳಿಗಳ ಕುರಿತು ಬಿಡೆನ್ ಆಡಳಿತವು ಪಶ್ಚಿಮ ದಂಡೆಯಲ್ಲಿ ವಿಧಿಸಲಾದ ಇಸ್ರೇಲಿ ವಸಾಹತುಗಾರರ ಮೇಲಿನ ನಿರ್ಬಂಧಗಳನ್ನು ಅವರು ರದ್ದುಗೊಳಿಸಿದರು.

ಸೋಮವಾರ ಟ್ರಂಪ್ ತಮ್ಮ ಭಾಷಣದಲ್ಲಿ ಕದನ ವಿರಾಮದ ಬಗ್ಗೆ ಗಮನಸೆಳೆದರು, ಅವರು ತಮ್ಮನ್ನು “ಶಾಂತಿ ದೂತ” ಎಂದು ಬಣ್ಣಿಸಿಕೊಂಡರು. ನಂತರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರ್ಯಾಲಿಯಲ್ಲಿ, ಟ್ರಂಪ್ ಗಾಜಾದಲ್ಲಿ ಇನ್ನೂ ಒತ್ತೆಯಾಳುಗಳಾಗಿರುವ ಕುಟುಂಬ ಸದಸ್ಯರನ್ನು ಆಹ್ವಾನಿಸಿದ್ದರು.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...