Homeಅಂತರಾಷ್ಟ್ರೀಯಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

- Advertisement -
- Advertisement -

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನೊಳಗೆ ಪರಿಸ್ಥಿತಿ ತದ್ವಿರುದ್ಧವಾಗಿರುತ್ತದೆ ಎಂದು ತಾವು ನಿರೀಕ್ಷಿಸಿದ್ದಾಗಿ ತಿಳಿಸಿರುವ ಅವರು, ಅಲ್ಲಿನ ಜನಸಾಗರ ನೋಡಿ ಆಶ್ಚರ್ಯವಾಯಿತು ಮತ್ತು ಇರಾನ್‌ನ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಎಂದೇ ನಾನು ಭಾವಿಸಿದ್ದೆ ಎಂದು ಆಕ್ಸಿಯಾಸ್ ಸಂಸ್ಥೆಯೊಂದಿಗೆ ಮಾತನಾಡುತ್ತಾ ತಮ್ಮ ಆಘಾತವನ್ನು ಹೊರಹಾಕಿದ್ದಾರೆ.

ಶನಿವಾರ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಿದ್ದು, ಲಕ್ಷಾಂತರ ಶೋಕತಪ್ತರು ಜಮಾಯಿಸಿದ್ದಾರೆ. ಜನರು ಖಮೇನಿ ಅವರ ಚಿತ್ರವಿರುವ ಬ್ಯಾನರ್‌ಗಳನ್ನು ಹಿಡಿದು, “ನಮ್ಮ ಮಾತು ಒಂದೇ, ಸೇಡು ಸೇಡು” ಎಂದು ತೀವ್ರ ಆಕ್ರೋಶದ ಘೋಷಣೆಗಳನ್ನು ಕೂಗುತ್ತಿದ್ದಾರೆ. 1989 ರಿಂದ ಇರಾನ್ ಅನ್ನು ಮುನ್ನಡೆಸಿದ್ದ 86 ವರ್ಷದ ಖಮೇನಿ ಅವರು, ಇರಾನ್-ಇಸ್ರೇಲ್ ಯುದ್ಧದ ಆರಂಭದಲ್ಲಿ ನಡೆದ ಇಸ್ರೇಲಿ ದಾಳಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಹತರಾಗಿದ್ದರು. ಯುದ್ಧದ ತೀವ್ರತೆಯ ಕಾರಣದಿಂದಾಗಿ ಇಷ್ಟು ದಿನ ಅವರ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಶಿಯಾ ಸಂಪ್ರದಾಯದಂತೆ ಪುರುಷರ ಗುಂಪುಗಳು ತೀವ್ರ ದುಃಖದಿಂದ ಎದೆಗೆ ಬಡಿದುಕೊಳ್ಳುತ್ತಾ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಖಮೇನಿ ಅವರ ಪಾರ್ಥಿವ ಶರೀರವನ್ನು ಸದ್ಯ ಮೂರು ದಿನಗಳ ಕಾಲ ಟೆಹ್ರಾನ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ತದನಂತರ ಜುಲೈ 7ರ ಮಂಗಳವಾರದಂದು ಪವಿತ್ರ ನಗರವಾದ ಕೋಮ್‌ಗೆ ಕೊಂಡೊಯ್ಯಲಾಗುವುದು. ಬುಧವಾರ ನೆರೆಯ ದೇಶವಾದ ಇರಾಕ್‌ನಲ್ಲಿ ದೊಡ್ಡ ಮೆರವಣಿಗೆ ನಡೆಸಿದ ಬಳಿಕ, ಗುರುವಾರ ಅವರ ಹುಟ್ಟೂರಾದ ಮಶಾದ್‌ನಲ್ಲಿ ಸಮಾಧಿ ಮಾಡಲಾಗುವುದು. ಇಸ್ರೇಲ್ ದಾಳಿಯಲ್ಲಿ ಮೃತಪಟ್ಟ ಅವರ ಮಗಳು, ಅಳಿಯ ಹಾಗೂ ಮೊಮ್ಮಗಳ ಪಕ್ಕದಲ್ಲೇ ಖಮೇನಿ ಅವರನ್ನು ಹೂಳಲು ನಿರ್ಧರಿಸಲಾಗಿದೆ.

ಇದೇ ವೇಳೆ ಇರಾನ್‌ನ ಪ್ರಸ್ತುತ ಹೊಸ ಸರ್ವೋಚ್ಚ ನಾಯಕ ಹಾಗೂ ಖಮೇನಿ ಅವರ ಪುತ್ರರಾದ ಮೊಜ್ತಬಾ ಖಮೇನಿ ಅವರು ಭದ್ರತಾ ಕಾರಣಗಳಿಂದಾಗಿ ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಇಸ್ರೇಲ್‌ನ ನಿರಂತರ ಬೆದರಿಕೆ ಹಾಗೂ ಕಣ್ಗಾವಲು ಇರುವುದರಿಂದ, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪಾಯಕಾರಿ ಎಂದು ಭಾರತದಲ್ಲಿನ ಇರಾನ್ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ಸ್ಪಷ್ಟಪಡಿಸಿದ್ದಾರೆ.

ಈ ಭಾರಿ ಅಂತ್ಯಕ್ರಿಯೆಯು ಇರಾನ್‌ನ ಹೊಸ ನಾಯಕತ್ವಕ್ಕೆ ಮತ್ತು ಅಲ್ಲಿನ ಆಡಳಿತಕ್ಕೆ ಹೊಸ ಶಕ್ತಿ ನೀಡುವ ಸಾಧ್ಯತೆಯಿದೆ. ಸದ್ಯ ಇರಾನ್ ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ಹಿಡಿತವನ್ನು ಬಳಸಿಕೊಂಡು, ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಅಮೆರಿಕದೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ ಇಸ್ರೇಲ್ ಮತ್ತೆ ದಾಳಿ ಮಾಡಬಹುದು ಎಂಬ ಆತಂಕವೂ ಇರಾನ್ ಅನ್ನು ಕಾಡುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಈ ಅಂತ್ಯಕ್ರಿಯೆ ಭಾರಿ ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...