Homeಮುಖಪುಟಟ್ರಂಪ್, ಪಾಕ್ ಸೇನಾ ಮುಖ್ಯಸ್ಥನ ಭೋಜನ ಕೂಟ | ಆಲಿಂಗನಕ್ಕೆ ಹೊಡೆತ ಎಂದ ಕಾಂಗ್ರೆಸ್

ಟ್ರಂಪ್, ಪಾಕ್ ಸೇನಾ ಮುಖ್ಯಸ್ಥನ ಭೋಜನ ಕೂಟ | ಆಲಿಂಗನಕ್ಕೆ ಹೊಡೆತ ಎಂದ ಕಾಂಗ್ರೆಸ್

- Advertisement -
- Advertisement -

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೋಜನ ಕೂಟ ನೀಡಿದ ನಂತರ ಕಾಂಗ್ರೆಸ್ ಗುರುವಾರ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದ್ದು, ಇದು ಭಾರತೀಯ ರಾಜತಾಂತ್ರಿಕತೆಗೆ “ದೊಡ್ಡ ಹೊಡೆತ” ಎಂದು ಹೇಳಿದೆ. “ಇದು ಭಾರತೀಯ ರಾಜತಾಂತ್ರಿಕತೆಗೆ (ಮತ್ತು ಆಲಿಂಗನ ರಾಜತಾಂತ್ರಿಕತೆಗೂ) ದೊಡ್ಡ ಹೊಡೆತವಾಗಿದೆ” ಎಂದು ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದೆ. ಟ್ರಂಪ್ & ಪಾಕ್ ಸೇನಾ

ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಪಾಕಿಸ್ತಾನ ಮುಖ್ಯಸ್ಥನೊ ಅಥವಾ ಸರ್ಕಾರದ ಮುಖ್ಯಸ್ಥನೊ ಅಲ್ಲ. ಬದಲಾಗಿ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿದ್ದು, ಆದರೆ ಅವರನ್ನೆ ಟ್ರಂಪ್ ಊಟಕ್ಕೆ ಆಹ್ವಾನಿಸುತ್ತಾರೆ ಮತ್ತು ಹೆಚ್ಚಿನ ಪ್ರಶಂಸೆಯನ್ನು ಮಾಡುತ್ತಾರೆ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಇದೇ ವ್ಯಕ್ತಿಯ ಕ್ರೂರ ಮತ್ತು ಪ್ರಚೋದನಕಾರಿ ಹೇಳಿಕೆಗಳ ಕಾರಣಕ್ಕೆ ಪಹಲ್ಗಾಮ್ ದಾಳಿ ಆಯೋಜಿಸ್ಪಟ್ಟಿತ್ತು ಮತ್ತು ಅವರದೇ ಸೈನ್ಯದ ಉಪಕರಣದಿಂದ ಈ ದಾಳಿ ಸಂಭವಿಸಿತ್ತು” ಎಂದು ರಮೇಶ್ ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ. ಟ್ರಂಪ್ ಮತ್ತು ಅವರ ಭೇಟಿಯು ಇದು ಭಾರತೀಯ ರಾಜತಾಂತ್ರಿಕತೆಗೆ (ಮತ್ತು ಆಲಿಂಗನ ರಾಜತಾಂತ್ರಿಕತೆಗೂ) ದೊಡ್ಡ ಹೊಡೆತವಾಗಿದೆ ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಮೇಶ್ ಅವರು ಟೀಕಿಸಿದ್ದಾರೆ.

”ಆಲಿಂಗನ ರಾಜತಾಂತ್ರಿಕತೆ” ಪದವನ್ನು ಬಳಸಿ ಕಾಂಗ್ರೆಸ್ ಪಕ್ಷವೂ ಪ್ರಧಾನಿ ಮೋದಿ ಅವರನ್ನು ನೇರವಾಗಿ ಟೀಕಿಸುತ್ತಿದೆ. ಅಂತರರಾಷ್ಟ್ರೀಯ ಅಥವಾ ದ್ವಿಪಕ್ಷೀಯ ಕಾರ್ಯಕ್ರಮಗಳಲ್ಲಿ ವಿದೇಶಿ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ನಡೆಯುವ ಅವರ ಸಭೆಗಳಲ್ಲಿ ಪ್ರಧಾನಿ ಮೋದಿ ಹೆಚ್ಚಾಗಿ “ಆಲಿಂಗನ” ಮಾಡುತ್ತಾರೆ. ಹಾಗಾಗಿ ಕಾಂಗ್ರೆಸ್ “ಆಲಿಂಗನ ರಾಜತಾಂತ್ರಿಕತೆ” ಎಂಬ ಪದವನ್ನು ಬಳಸುತ್ತಿದೆ.

ಈ ಮಧ್ಯೆ, ಭಾರತ ಮತ್ತು ಪಾಕಿಸ್ತಾನದ ಇಬ್ಬರು “ಅತ್ಯಂತ ಬುದ್ಧಿವಂತ” ನಾಯಕರು ವಾರಗಳ ಹಿಂದೆ ಪರಮಾಣು ಯುದ್ಧವನ್ನು ಮುಂದುವರಿಸದಿರಲು “ನಿರ್ಧರಿಸಿದ್ದಾರೆ” ಎಂದು ಟ್ರಂಪ್ ಹೇಳಿದ್ದಾರೆ. ಅದಾಗ್ಯೂ,  ಎರಡು ನೆರೆಯ ರಾಷ್ಟ್ರಗಳ ನಡುವಿನ ಯುದ್ಧವನ್ನು ನಿಲ್ಲಿಸಿದ ಕೀರ್ತಿಯನ್ನು ಅವರು ಈ ಬಾರಿ ಹೇಳಿಕೊಳ್ಳಲಿಲ್ಲ.

ಬುಧವಾರ ಶ್ವೇತಭವನದಲ್ಲಿ ಮುನೀರ್ ಅವರನ್ನು ಊಟಕ್ಕೆ ಆತಿಥ್ಯ ವಹಿಸಿದ ನಂತರ ಓವಲ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಟ್ರಂಪ್ ಈ ಹೇಳಿಕೆಗಳನ್ನು ನೀಡಿದ್ದಾರೆ. ಮುನೀರ್ ಅವರನ್ನು ಭೇಟಿಯಾಗುವ ಗೌರವ ತನಗೆ ಸಿಕ್ಕಿದೆ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್ & ಪಾಕ್ ಸೇನಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್ 

ಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...