Homeಅಂತರಾಷ್ಟ್ರೀಯತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

ತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೋಲನುಭವಿಸಿದ್ದಾರೆ. ಜಾರ್ಜಿಯಾದಲ್ಲಿ ಜೋ ಬೈಡೆನ್ ಅವರ ಗೆಲುವನ್ನು ತಿರುಚಲು ಅಲ್ಲಿನ ಚುನಾವಣಾ ಮುಖ್ಯಸ್ಥರಿಗೆ ಡೊನಾಲ್ಡ್‌ ಟ್ರಂಪ್‌ ಕರೆ ಮಾಡಿದ್ದು ಇದೀಗ ಭಾರಿ ವಿವಾದ ಎಬ್ಬಿಸಿದೆ.

ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಂದಾಗಿಂನಿಂದಲೂ ಡೊನಾಲ್ಡ್‌ ಟ್ರಂಪ್ ತನ್ನ ಸೋಲನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಅಲ್ಲದೆ ಫಲಿತಾಂಶಗಳ ವಿರುದ್ದ ಅವರ ಪ್ರಚಾರ ಅಭಿಯಾನ ಸಮಿತಿಯು ಸುಪ್ರೀಂಕೋರ್ಟ್‌ ಕದ ತಟ್ಟಿತ್ತು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ಡೊನಾಲ್ಡ್ ಟ್ರಂಪ್‌ ಚುನಾವಣೆಯಲ್ಲಿ ತನಗಾದ ಸೋಲನ್ನು ಗೆಲುವಾಗಿ ಪರಿವರ್ತಿಸಲು ಬೇಕಾಗಿರುವ ಅಗತ್ಯ ಮತಗಳನ್ನು ಹುಡುಕಲು ಆಗ್ರಹಿಸಿ ಕರೆ ಮಾಡಿರುವುದನ್ನು, ಅಮೆರಿಕದ ಮಾಧ್ಯಮ ವಾಷಿಂಗ್ಟನ್‌ ಪೋಸ್ಟ್ ಶನಿವಾರ ವರದಿ ಮಾಡಿದೆ. ಅಮೆರಿಕದ ಕಾನೂನು ತಜ್ಞರು ಇದು ಅಧಿಕಾರದ ದುರ್ಬಳಕೆ ಹಾಗೂ ಸಂಭಾವ್ಯ ಅಪರಾಧ ಕೃತ್ಯ ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ:  ಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ಡೊನಾಲ್ಡ್‌ ಟ್ರಂಪ್ ಜಾರ್ಜಿಯಾದಲ್ಲಿ 11,779 ಮತಗಳಿಂದ ಸೋತಿದ್ದರು, ಅವರು ತನ್ನ ಕರೆಯಲ್ಲಿ, “ಜಾರ್ಜಿಯಾ ಜನರು ಹಾಗೂ ದೇಶದ ಜನರು ಆಕ್ರೋಶದಲ್ಲಿದ್ದಾರೆ. ಮತಗಳನ್ನು ಮತ್ತೆ ಎಣಿಕೆ ಮಾಡಿದ್ದೀರಿ ಎಂದು ಹೇಳುವುದರಲ್ಲಿ ಯಾವುದೇ ತಪ್ಪು ಇಲ್ಲ. 11,780 ಮತಗಳನ್ನು ಹುಡುಕಿ, ನನಗೆ ಬೇಕಾಗಿರುವುದು ಇಷ್ಟೇ. ಯಾಕೆಂದರೆ ನಾವು ಜಾರ್ಜಿಯಾವನ್ನು ಗೆದ್ದಿದ್ದೇವೆ” ಎಂದು ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ.

ಚುನಾವಣಾ ಸಂಸ್ಥೆಯ ಕಚೇರಿಯು ಟ್ರಂಪ್‌ ಜೊತೆಗಿನ ಕರೆಯಲ್ಲಿ ಟ್ರಂಪ್ ಪ್ರತಿಪಾದನೆಯನ್ನು ನಿರಾಕರಿಸಿದ್ದು, ಜಾರ್ಜಿಯಾದಲ್ಲಿ ಟ್ರಂಪ್ ಸೋತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಯು, “ನಿಮ್ಮಲ್ಲಿರುವ ಅಂಕಿ ಅಂಶಗಳು ಸರಿಯಾಗಿಲ್ಲ” ಎಂದು ಟ್ರಂಪ್‌ಗೆ ತಿಳಿಸಿದರೂ, “ಜಾರ್ಜಿಯಾದಲ್ಲಿ ತಾನು ಸೋಲಲು ಸಾಧ್ಯವೇ ಇಲ್ಲ” ಎಂದು ಟ್ರಂಪ್‌ ಮತ್ತೆ ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಉಲ್ಲೇಖಿಸಿದೆ.

ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿರುವುದನ್ನು ಅಲ್ಲಿನ ವಿಪಕ್ಷದ ನಾಯಕರು ಟೀಕಿಸಿದ್ದು, ಒತ್ತಡಕ್ಕೆ ಮಣಿಯದ ಚುನಾವಣಾ ಅಧಿಕಾರಿಯನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...