Homeಅಂತರಾಷ್ಟ್ರೀಯತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

ತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೋಲನುಭವಿಸಿದ್ದಾರೆ. ಜಾರ್ಜಿಯಾದಲ್ಲಿ ಜೋ ಬೈಡೆನ್ ಅವರ ಗೆಲುವನ್ನು ತಿರುಚಲು ಅಲ್ಲಿನ ಚುನಾವಣಾ ಮುಖ್ಯಸ್ಥರಿಗೆ ಡೊನಾಲ್ಡ್‌ ಟ್ರಂಪ್‌ ಕರೆ ಮಾಡಿದ್ದು ಇದೀಗ ಭಾರಿ ವಿವಾದ ಎಬ್ಬಿಸಿದೆ.

ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಂದಾಗಿಂನಿಂದಲೂ ಡೊನಾಲ್ಡ್‌ ಟ್ರಂಪ್ ತನ್ನ ಸೋಲನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಅಲ್ಲದೆ ಫಲಿತಾಂಶಗಳ ವಿರುದ್ದ ಅವರ ಪ್ರಚಾರ ಅಭಿಯಾನ ಸಮಿತಿಯು ಸುಪ್ರೀಂಕೋರ್ಟ್‌ ಕದ ತಟ್ಟಿತ್ತು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ಡೊನಾಲ್ಡ್ ಟ್ರಂಪ್‌ ಚುನಾವಣೆಯಲ್ಲಿ ತನಗಾದ ಸೋಲನ್ನು ಗೆಲುವಾಗಿ ಪರಿವರ್ತಿಸಲು ಬೇಕಾಗಿರುವ ಅಗತ್ಯ ಮತಗಳನ್ನು ಹುಡುಕಲು ಆಗ್ರಹಿಸಿ ಕರೆ ಮಾಡಿರುವುದನ್ನು, ಅಮೆರಿಕದ ಮಾಧ್ಯಮ ವಾಷಿಂಗ್ಟನ್‌ ಪೋಸ್ಟ್ ಶನಿವಾರ ವರದಿ ಮಾಡಿದೆ. ಅಮೆರಿಕದ ಕಾನೂನು ತಜ್ಞರು ಇದು ಅಧಿಕಾರದ ದುರ್ಬಳಕೆ ಹಾಗೂ ಸಂಭಾವ್ಯ ಅಪರಾಧ ಕೃತ್ಯ ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ:  ಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ಡೊನಾಲ್ಡ್‌ ಟ್ರಂಪ್ ಜಾರ್ಜಿಯಾದಲ್ಲಿ 11,779 ಮತಗಳಿಂದ ಸೋತಿದ್ದರು, ಅವರು ತನ್ನ ಕರೆಯಲ್ಲಿ, “ಜಾರ್ಜಿಯಾ ಜನರು ಹಾಗೂ ದೇಶದ ಜನರು ಆಕ್ರೋಶದಲ್ಲಿದ್ದಾರೆ. ಮತಗಳನ್ನು ಮತ್ತೆ ಎಣಿಕೆ ಮಾಡಿದ್ದೀರಿ ಎಂದು ಹೇಳುವುದರಲ್ಲಿ ಯಾವುದೇ ತಪ್ಪು ಇಲ್ಲ. 11,780 ಮತಗಳನ್ನು ಹುಡುಕಿ, ನನಗೆ ಬೇಕಾಗಿರುವುದು ಇಷ್ಟೇ. ಯಾಕೆಂದರೆ ನಾವು ಜಾರ್ಜಿಯಾವನ್ನು ಗೆದ್ದಿದ್ದೇವೆ” ಎಂದು ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ.

ಚುನಾವಣಾ ಸಂಸ್ಥೆಯ ಕಚೇರಿಯು ಟ್ರಂಪ್‌ ಜೊತೆಗಿನ ಕರೆಯಲ್ಲಿ ಟ್ರಂಪ್ ಪ್ರತಿಪಾದನೆಯನ್ನು ನಿರಾಕರಿಸಿದ್ದು, ಜಾರ್ಜಿಯಾದಲ್ಲಿ ಟ್ರಂಪ್ ಸೋತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಯು, “ನಿಮ್ಮಲ್ಲಿರುವ ಅಂಕಿ ಅಂಶಗಳು ಸರಿಯಾಗಿಲ್ಲ” ಎಂದು ಟ್ರಂಪ್‌ಗೆ ತಿಳಿಸಿದರೂ, “ಜಾರ್ಜಿಯಾದಲ್ಲಿ ತಾನು ಸೋಲಲು ಸಾಧ್ಯವೇ ಇಲ್ಲ” ಎಂದು ಟ್ರಂಪ್‌ ಮತ್ತೆ ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಉಲ್ಲೇಖಿಸಿದೆ.

ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿರುವುದನ್ನು ಅಲ್ಲಿನ ವಿಪಕ್ಷದ ನಾಯಕರು ಟೀಕಿಸಿದ್ದು, ಒತ್ತಡಕ್ಕೆ ಮಣಿಯದ ಚುನಾವಣಾ ಅಧಿಕಾರಿಯನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...