Homeಅಂತರಾಷ್ಟ್ರೀಯತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

ತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೋಲನುಭವಿಸಿದ್ದಾರೆ. ಜಾರ್ಜಿಯಾದಲ್ಲಿ ಜೋ ಬೈಡೆನ್ ಅವರ ಗೆಲುವನ್ನು ತಿರುಚಲು ಅಲ್ಲಿನ ಚುನಾವಣಾ ಮುಖ್ಯಸ್ಥರಿಗೆ ಡೊನಾಲ್ಡ್‌ ಟ್ರಂಪ್‌ ಕರೆ ಮಾಡಿದ್ದು ಇದೀಗ ಭಾರಿ ವಿವಾದ ಎಬ್ಬಿಸಿದೆ.

ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಂದಾಗಿಂನಿಂದಲೂ ಡೊನಾಲ್ಡ್‌ ಟ್ರಂಪ್ ತನ್ನ ಸೋಲನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಅಲ್ಲದೆ ಫಲಿತಾಂಶಗಳ ವಿರುದ್ದ ಅವರ ಪ್ರಚಾರ ಅಭಿಯಾನ ಸಮಿತಿಯು ಸುಪ್ರೀಂಕೋರ್ಟ್‌ ಕದ ತಟ್ಟಿತ್ತು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ಡೊನಾಲ್ಡ್ ಟ್ರಂಪ್‌ ಚುನಾವಣೆಯಲ್ಲಿ ತನಗಾದ ಸೋಲನ್ನು ಗೆಲುವಾಗಿ ಪರಿವರ್ತಿಸಲು ಬೇಕಾಗಿರುವ ಅಗತ್ಯ ಮತಗಳನ್ನು ಹುಡುಕಲು ಆಗ್ರಹಿಸಿ ಕರೆ ಮಾಡಿರುವುದನ್ನು, ಅಮೆರಿಕದ ಮಾಧ್ಯಮ ವಾಷಿಂಗ್ಟನ್‌ ಪೋಸ್ಟ್ ಶನಿವಾರ ವರದಿ ಮಾಡಿದೆ. ಅಮೆರಿಕದ ಕಾನೂನು ತಜ್ಞರು ಇದು ಅಧಿಕಾರದ ದುರ್ಬಳಕೆ ಹಾಗೂ ಸಂಭಾವ್ಯ ಅಪರಾಧ ಕೃತ್ಯ ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ:  ಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ಡೊನಾಲ್ಡ್‌ ಟ್ರಂಪ್ ಜಾರ್ಜಿಯಾದಲ್ಲಿ 11,779 ಮತಗಳಿಂದ ಸೋತಿದ್ದರು, ಅವರು ತನ್ನ ಕರೆಯಲ್ಲಿ, “ಜಾರ್ಜಿಯಾ ಜನರು ಹಾಗೂ ದೇಶದ ಜನರು ಆಕ್ರೋಶದಲ್ಲಿದ್ದಾರೆ. ಮತಗಳನ್ನು ಮತ್ತೆ ಎಣಿಕೆ ಮಾಡಿದ್ದೀರಿ ಎಂದು ಹೇಳುವುದರಲ್ಲಿ ಯಾವುದೇ ತಪ್ಪು ಇಲ್ಲ. 11,780 ಮತಗಳನ್ನು ಹುಡುಕಿ, ನನಗೆ ಬೇಕಾಗಿರುವುದು ಇಷ್ಟೇ. ಯಾಕೆಂದರೆ ನಾವು ಜಾರ್ಜಿಯಾವನ್ನು ಗೆದ್ದಿದ್ದೇವೆ” ಎಂದು ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ.

ಚುನಾವಣಾ ಸಂಸ್ಥೆಯ ಕಚೇರಿಯು ಟ್ರಂಪ್‌ ಜೊತೆಗಿನ ಕರೆಯಲ್ಲಿ ಟ್ರಂಪ್ ಪ್ರತಿಪಾದನೆಯನ್ನು ನಿರಾಕರಿಸಿದ್ದು, ಜಾರ್ಜಿಯಾದಲ್ಲಿ ಟ್ರಂಪ್ ಸೋತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಯು, “ನಿಮ್ಮಲ್ಲಿರುವ ಅಂಕಿ ಅಂಶಗಳು ಸರಿಯಾಗಿಲ್ಲ” ಎಂದು ಟ್ರಂಪ್‌ಗೆ ತಿಳಿಸಿದರೂ, “ಜಾರ್ಜಿಯಾದಲ್ಲಿ ತಾನು ಸೋಲಲು ಸಾಧ್ಯವೇ ಇಲ್ಲ” ಎಂದು ಟ್ರಂಪ್‌ ಮತ್ತೆ ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಉಲ್ಲೇಖಿಸಿದೆ.

ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿರುವುದನ್ನು ಅಲ್ಲಿನ ವಿಪಕ್ಷದ ನಾಯಕರು ಟೀಕಿಸಿದ್ದು, ಒತ್ತಡಕ್ಕೆ ಮಣಿಯದ ಚುನಾವಣಾ ಅಧಿಕಾರಿಯನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...