Homeಅಂತರಾಷ್ಟ್ರೀಯಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ 15 ಅಂಶಗಳ ಪ್ರಸ್ತಾಪವನ್ನು ಮಂಡಿಸಿದೆ ಎಂದು ವರದಿಯಾಗಿದೆ.

ಅಮೆರಿಕದ ಪ್ರಸ್ತಾಪವನ್ನು ಪಾಕಿಸ್ತಾನ ಮೂಲಕ ಇರಾನ್ ಸ್ವೀಕರಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಯುದ್ದ ಕೊನೆಗೊಳಿಸುವ ಕುರಿತು ಇರಾನ್‌ನ ಸರಿಯಾದ ವ್ಯಕ್ತಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಮಾ.24) ಹೇಳಿದ್ದರು. ಆದರೆ, ಇರಾನ್ ಇದನ್ನು ತಳ್ಳಿಹಾಕಿದೆ.

ವರದಿಗಳ ಪ್ರಕಾರ, ಇರಾನ್‌ ಮೇಲೆ ದಾಳಿ ನಡೆಸಿ ಇಸ್ರೇಲ್ ಮತ್ತು ಅಮೆರಿಕ ಕೈ ಸುಟ್ಟುಕೊಂಡಿವೆ. ಇರಾನ್‌ನ ತಿರುಗೇಟಿಗೆ ಟ್ರಂಪ್‌ ಲೆಕ್ಕಾಚಾರಗಳು ತಲೆ ಕೆಳಗಾಗಿವೆ. ಹಾಗಾಗಿ, ಅಮೆರಿಕವೇ ಯುದ್ಧ ನಿಲ್ಲಿಸುವ ಪ್ರಸ್ತಾವ ಮುಂದಿಟ್ಟಿದೆ.

ಅಮೆರಿಕ ಇರಾನ್‌ ಮುಂದೆ ಇಟ್ಟಿರುವ ಪ್ರಸ್ತಾಪದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ

1. ಇರಾನ್ ತನ್ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ನಟಾಂಝ್, ಇಸ್ಫಹಾನ್, ಮತ್ತು ಫೋರ್ಡೋ ಸೌಲಭ್ಯಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.

2. ಇರಾನ್ ತನ್ನ ನೆಲದಲ್ಲಿ ಯುರೇನಿಯಂ ಶುದ್ಧೀಕರಣವನ್ನು ನಿಲ್ಲಿಸಬೇಕು ಮತ್ತು ಈಗಿರುವ ಶುದ್ಧೀಕರಿಸಿದ ಯುರೇನಿಯಂ ಅನ್ನು ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಗೆ (ಐಎಇಎ) ಹಸ್ತಾಂತರಿಸಬೇಕು.

3. ಬ್ಯಾಲಿಸ್ಟಿಕ್ ಕ್ಷಿಪಣಿಗಳ ತಯಾರಿಕೆ ಮತ್ತು ಪರೀಕ್ಷೆಯನ್ನು ನಿಲ್ಲಿಸಬೇಕು ಹಾಗೂ ಕ್ಷಿಪಣಿಗಳ ಬಳಕೆಯನ್ನು ಕೇವಲ ಆತ್ಮರಕ್ಷಣೆಗಷ್ಟೇ ಸೀಮಿತಗೊಳಿಸಬೇಕು.

4. ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಝ್ ಜಲಸಂಧಿಯನ್ನು ಮುಕ್ತವಾಗಿರಿಸಬೇಕು ಮತ್ತು ಪ್ರಾದೇಶಿಕ ಬಂಡುಕೋರ ಅಥವಾ ಸಶಸ್ತ್ರ ಗುಂಪುಗಳಿಗೆ ನೀಡುತ್ತಿರುವ ಆರ್ಥಿಕ ಮತ್ತು ಶಸ್ತ್ರಾಸ್ತ್ರ ನೆರವನ್ನು ಇರಾನ್ ನಿಲ್ಲಿಸಬೇಕು.

ಈ ಮೇಲಿನ ಷರತ್ತುಗಳನ್ನು ಪಾಲಿಸಿದರೆ ಇರಾನ್ ಮೇಲಿರುವ ಪರಮಾಣು ಸಂಬಂಧಿತ ಕಠಿಣ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸುವುದಾಗಿ ಹೇಳಿದೆಯಂತೆ.

ಅಲ್ಲದೆ, ಇರಾನ್‌ನ ನಾಗರಿಕ ಪರಮಾಣು ಇಂಧನ ಯೋಜನೆಗೆ ಸಹಾಯ ಒದಗಿಸುತ್ತೇವೆ ಮತ್ತು ಮೇಲ್ವಿಚಾರಣೆ ಮಾಡುತ್ತೇವೆ. ಈ ಒಪ್ಪಂದದ ಕುರಿತು ಚರ್ಚಿಸಲು ಒಂದು ತಿಂಗಳ ಕಾಲ ಕದನ ವಿರಾಮ ಘೋಷಿಸಲು ಸಿದ್ಧರಿದ್ದೇವೆ ಎಂಬುವುದಾಗಿ ಭರವಸೆ ನೀಡಿದೆ ಎಂದು ವರದಿಯಾಗಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಅಮೆರಿಕ ಅಥವಾ ಟ್ರಂಪ್ ಅವರ ಪ್ರಸ್ತಾವನೆಗೆ ಪ್ರತಿಕ್ರಿಯೆಯಾಗಿ ಇರಾನ್ ಕಠಿಣ ಕದನ ವಿರಾಮದ ಷರತ್ತುಗಳನ್ನು ಅಥವಾ ಬೇಡಿಕೆಗಳನ್ನು ಮುಂದಿಡಲು ನಿರ್ಧರಿಸಿದೆ.

ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಮುಚ್ಚುಬೇಕು. ಇರಾನ್ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಸಾರಿಗೆ ಶುಲ್ಕವನ್ನು ವಿಧಿಸಲು ಅವಕಾಶ ನೀಡಬೇಕು ಇತ್ಯಾದಿ ಇರಾನ್‌ನ ಬೇಡಿಕೆಗಳಲ್ಲಿ ಸೇರಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಇರಾನ್ ಒಪ್ಪಂದಕ್ಕೆ ಸಿದ್ಧವಿದೆ” ಎಂದು ಹೇಳಿದ್ದರೂ, ಇರಾನ್‌ನ ಮಿಲಿಟರಿ ವಕ್ತಾರರು ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿದಿದೆ.

ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಈ ಯುದ್ಧವನ್ನು ಮುಂದುವರಿಸುವಂತೆ ಟ್ರಂಪ್ ಅವರ ಮೇಲೆ ಒತ್ತಡ ಹೇರುತ್ತಿದ್ದ ಇಸ್ರೇಲ್ ಅಧಿಕಾರಿಗಳಿಗೆ ಅಮೆರಿಕದ ಕದನ ವಿರಾಮದ ಪ್ರಸ್ತಾವನೆಯು ಅಚ್ಚರಿ ತಂದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಈ ಬೆಳವಣಿಗೆಗಳ ನಡುವೆಯೇ, ಅಮೆರಿಕವು ಈ ಪ್ರದೇಶಕ್ಕೆ ಹೆಚ್ಚುವರಿಯಾಗಿ 3,000ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಸುಮಾರು 50,000 ಅಮೆರಿಕನ್ ಸೈನಿಕರು ಮೊಕ್ಕಾಂ ಹೂಡಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಕೊನೆಗಾಣಿಸಲು ಮರುಮಾತುಕತೆಗೆ ವೇದಿಕೆ ಒದಗಿಸಲು ಮುಂದಾಗಿರುವ ಪಾಕಿಸ್ತಾನದ ಮಧ್ಯಸ್ಥಗಾರರ ಮೂಲಕ ಈ ಶಾಂತಿ ಯೋಜನೆಯನ್ನು ಇರಾನ್‌ಗೆ ರವಾನಿಸಲಾಗಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ ವಿಷಯದ ಬಗ್ಗೆ ಮಾಹಿತಿಯಿರುವ ಮೂಲವೊಂದು ಅಮೆರಿಕವು ಇರಾನ್‌ನೊಂದಿಗೆ ಶಾಂತಿ ಯೋಜನೆಯನ್ನು ಹಂಚಿಕೊಂಡಿರುವುದನ್ನು ರಾಯಿಟರ್ಸ್‌ಗೆ ಖಚಿತಪಡಿಸಿದೆ, ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

ಮಂಗಳವಾರ ಟ್ರೂತ್ ಸೋಶಿಯಲ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪೋಸ್ಟ್ ಒಂದನ್ನು ಟ್ರಂಪ್ ರಿಶೇರ್ ಮಾಡಿದ್ದರು. ಇರಾನ್ ಯುದ್ಧವನ್ನು ಕೊನೆಗಾಣಿಸಲು, ಅರ್ಥಪೂರ್ಣ ಮತ್ತು ನಿರ್ಣಾಯಕ ಮಾತುಕತೆಗಳನ್ನು ಸುಗಮಗೊಳಿಸಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಆ ಪೋಸ್ಟ್‌ನಲ್ಲಿ ಷರೀಫ್ ತಿಳಿಸಿದ್ದರು.

ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯಲಿರುವ ಮಾತುಕತೆಗಳಲ್ಲಿ ಪಾಲ್ಗೊಳ್ಳಲು ಅಮೆರಿಕವು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ. ಆದರೆ, ಈ ಮಾತುಕತೆಗೆ ಇರಾನ್ ಅನ್ನು ಒಪ್ಪಿಸಲು ಮಧ್ಯಸ್ಥಗಾರರು ಇನ್ನೂ ಪ್ರಯತ್ನಿಸುತ್ತಿದ್ದಾರೆ. ಮುಂದಿನ ವಾರವೇ ಈ ಮಾತುಕತೆಗಳು ಪ್ರಾರಂಭವಾಗುವ ಸಾಧ್ಯತೆಯಿದ್ದು, ಅಮೆರಿಕದ ಪರವಾಗಿ ಮಧ್ಯಪ್ರಾಚ್ಯದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...