Homeಅಂತರಾಷ್ಟ್ರೀಯಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ 15 ಅಂಶಗಳ ಪ್ರಸ್ತಾಪವನ್ನು ಮಂಡಿಸಿದೆ ಎಂದು ವರದಿಯಾಗಿದೆ.

ಅಮೆರಿಕದ ಪ್ರಸ್ತಾಪವನ್ನು ಪಾಕಿಸ್ತಾನ ಮೂಲಕ ಇರಾನ್ ಸ್ವೀಕರಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಯುದ್ದ ಕೊನೆಗೊಳಿಸುವ ಕುರಿತು ಇರಾನ್‌ನ ಸರಿಯಾದ ವ್ಯಕ್ತಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಮಾ.24) ಹೇಳಿದ್ದರು. ಆದರೆ, ಇರಾನ್ ಇದನ್ನು ತಳ್ಳಿಹಾಕಿದೆ.

ವರದಿಗಳ ಪ್ರಕಾರ, ಇರಾನ್‌ ಮೇಲೆ ದಾಳಿ ನಡೆಸಿ ಇಸ್ರೇಲ್ ಮತ್ತು ಅಮೆರಿಕ ಕೈ ಸುಟ್ಟುಕೊಂಡಿವೆ. ಇರಾನ್‌ನ ತಿರುಗೇಟಿಗೆ ಟ್ರಂಪ್‌ ಲೆಕ್ಕಾಚಾರಗಳು ತಲೆ ಕೆಳಗಾಗಿವೆ. ಹಾಗಾಗಿ, ಅಮೆರಿಕವೇ ಯುದ್ಧ ನಿಲ್ಲಿಸುವ ಪ್ರಸ್ತಾವ ಮುಂದಿಟ್ಟಿದೆ.

ಅಮೆರಿಕ ಇರಾನ್‌ ಮುಂದೆ ಇಟ್ಟಿರುವ ಪ್ರಸ್ತಾಪದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ

1. ಇರಾನ್ ತನ್ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ನಟಾಂಝ್, ಇಸ್ಫಹಾನ್, ಮತ್ತು ಫೋರ್ಡೋ ಸೌಲಭ್ಯಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.

2. ಇರಾನ್ ತನ್ನ ನೆಲದಲ್ಲಿ ಯುರೇನಿಯಂ ಶುದ್ಧೀಕರಣವನ್ನು ನಿಲ್ಲಿಸಬೇಕು ಮತ್ತು ಈಗಿರುವ ಶುದ್ಧೀಕರಿಸಿದ ಯುರೇನಿಯಂ ಅನ್ನು ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಗೆ (ಐಎಇಎ) ಹಸ್ತಾಂತರಿಸಬೇಕು.

3. ಬ್ಯಾಲಿಸ್ಟಿಕ್ ಕ್ಷಿಪಣಿಗಳ ತಯಾರಿಕೆ ಮತ್ತು ಪರೀಕ್ಷೆಯನ್ನು ನಿಲ್ಲಿಸಬೇಕು ಹಾಗೂ ಕ್ಷಿಪಣಿಗಳ ಬಳಕೆಯನ್ನು ಕೇವಲ ಆತ್ಮರಕ್ಷಣೆಗಷ್ಟೇ ಸೀಮಿತಗೊಳಿಸಬೇಕು.

4. ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಝ್ ಜಲಸಂಧಿಯನ್ನು ಮುಕ್ತವಾಗಿರಿಸಬೇಕು ಮತ್ತು ಪ್ರಾದೇಶಿಕ ಬಂಡುಕೋರ ಅಥವಾ ಸಶಸ್ತ್ರ ಗುಂಪುಗಳಿಗೆ ನೀಡುತ್ತಿರುವ ಆರ್ಥಿಕ ಮತ್ತು ಶಸ್ತ್ರಾಸ್ತ್ರ ನೆರವನ್ನು ಇರಾನ್ ನಿಲ್ಲಿಸಬೇಕು.

ಈ ಮೇಲಿನ ಷರತ್ತುಗಳನ್ನು ಪಾಲಿಸಿದರೆ ಇರಾನ್ ಮೇಲಿರುವ ಪರಮಾಣು ಸಂಬಂಧಿತ ಕಠಿಣ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸುವುದಾಗಿ ಹೇಳಿದೆಯಂತೆ.

ಅಲ್ಲದೆ, ಇರಾನ್‌ನ ನಾಗರಿಕ ಪರಮಾಣು ಇಂಧನ ಯೋಜನೆಗೆ ಸಹಾಯ ಒದಗಿಸುತ್ತೇವೆ ಮತ್ತು ಮೇಲ್ವಿಚಾರಣೆ ಮಾಡುತ್ತೇವೆ. ಈ ಒಪ್ಪಂದದ ಕುರಿತು ಚರ್ಚಿಸಲು ಒಂದು ತಿಂಗಳ ಕಾಲ ಕದನ ವಿರಾಮ ಘೋಷಿಸಲು ಸಿದ್ಧರಿದ್ದೇವೆ ಎಂಬುವುದಾಗಿ ಭರವಸೆ ನೀಡಿದೆ ಎಂದು ವರದಿಯಾಗಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಅಮೆರಿಕ ಅಥವಾ ಟ್ರಂಪ್ ಅವರ ಪ್ರಸ್ತಾವನೆಗೆ ಪ್ರತಿಕ್ರಿಯೆಯಾಗಿ ಇರಾನ್ ಕಠಿಣ ಕದನ ವಿರಾಮದ ಷರತ್ತುಗಳನ್ನು ಅಥವಾ ಬೇಡಿಕೆಗಳನ್ನು ಮುಂದಿಡಲು ನಿರ್ಧರಿಸಿದೆ.

ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಮುಚ್ಚುಬೇಕು. ಇರಾನ್ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಸಾರಿಗೆ ಶುಲ್ಕವನ್ನು ವಿಧಿಸಲು ಅವಕಾಶ ನೀಡಬೇಕು ಇತ್ಯಾದಿ ಇರಾನ್‌ನ ಬೇಡಿಕೆಗಳಲ್ಲಿ ಸೇರಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಇರಾನ್ ಒಪ್ಪಂದಕ್ಕೆ ಸಿದ್ಧವಿದೆ” ಎಂದು ಹೇಳಿದ್ದರೂ, ಇರಾನ್‌ನ ಮಿಲಿಟರಿ ವಕ್ತಾರರು ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿದಿದೆ.

ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಈ ಯುದ್ಧವನ್ನು ಮುಂದುವರಿಸುವಂತೆ ಟ್ರಂಪ್ ಅವರ ಮೇಲೆ ಒತ್ತಡ ಹೇರುತ್ತಿದ್ದ ಇಸ್ರೇಲ್ ಅಧಿಕಾರಿಗಳಿಗೆ ಅಮೆರಿಕದ ಕದನ ವಿರಾಮದ ಪ್ರಸ್ತಾವನೆಯು ಅಚ್ಚರಿ ತಂದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಈ ಬೆಳವಣಿಗೆಗಳ ನಡುವೆಯೇ, ಅಮೆರಿಕವು ಈ ಪ್ರದೇಶಕ್ಕೆ ಹೆಚ್ಚುವರಿಯಾಗಿ 3,000ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಸುಮಾರು 50,000 ಅಮೆರಿಕನ್ ಸೈನಿಕರು ಮೊಕ್ಕಾಂ ಹೂಡಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಕೊನೆಗಾಣಿಸಲು ಮರುಮಾತುಕತೆಗೆ ವೇದಿಕೆ ಒದಗಿಸಲು ಮುಂದಾಗಿರುವ ಪಾಕಿಸ್ತಾನದ ಮಧ್ಯಸ್ಥಗಾರರ ಮೂಲಕ ಈ ಶಾಂತಿ ಯೋಜನೆಯನ್ನು ಇರಾನ್‌ಗೆ ರವಾನಿಸಲಾಗಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ ವಿಷಯದ ಬಗ್ಗೆ ಮಾಹಿತಿಯಿರುವ ಮೂಲವೊಂದು ಅಮೆರಿಕವು ಇರಾನ್‌ನೊಂದಿಗೆ ಶಾಂತಿ ಯೋಜನೆಯನ್ನು ಹಂಚಿಕೊಂಡಿರುವುದನ್ನು ರಾಯಿಟರ್ಸ್‌ಗೆ ಖಚಿತಪಡಿಸಿದೆ, ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

ಮಂಗಳವಾರ ಟ್ರೂತ್ ಸೋಶಿಯಲ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪೋಸ್ಟ್ ಒಂದನ್ನು ಟ್ರಂಪ್ ರಿಶೇರ್ ಮಾಡಿದ್ದರು. ಇರಾನ್ ಯುದ್ಧವನ್ನು ಕೊನೆಗಾಣಿಸಲು, ಅರ್ಥಪೂರ್ಣ ಮತ್ತು ನಿರ್ಣಾಯಕ ಮಾತುಕತೆಗಳನ್ನು ಸುಗಮಗೊಳಿಸಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಆ ಪೋಸ್ಟ್‌ನಲ್ಲಿ ಷರೀಫ್ ತಿಳಿಸಿದ್ದರು.

ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯಲಿರುವ ಮಾತುಕತೆಗಳಲ್ಲಿ ಪಾಲ್ಗೊಳ್ಳಲು ಅಮೆರಿಕವು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ. ಆದರೆ, ಈ ಮಾತುಕತೆಗೆ ಇರಾನ್ ಅನ್ನು ಒಪ್ಪಿಸಲು ಮಧ್ಯಸ್ಥಗಾರರು ಇನ್ನೂ ಪ್ರಯತ್ನಿಸುತ್ತಿದ್ದಾರೆ. ಮುಂದಿನ ವಾರವೇ ಈ ಮಾತುಕತೆಗಳು ಪ್ರಾರಂಭವಾಗುವ ಸಾಧ್ಯತೆಯಿದ್ದು, ಅಮೆರಿಕದ ಪರವಾಗಿ ಮಧ್ಯಪ್ರಾಚ್ಯದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...