Homeಮುಖಪುಟಟ್ರಂಪ್ ಕೈಗೊಂಬೆಯಾಗಬೇಡಿ; ಭಾರತೀಯರಿಗಾಗಿ ಧ್ವನಿಯೆತ್ತಿ - ಮೋದಿಗೆ ಎಎಪಿ

ಟ್ರಂಪ್ ಕೈಗೊಂಬೆಯಾಗಬೇಡಿ; ಭಾರತೀಯರಿಗಾಗಿ ಧ್ವನಿಯೆತ್ತಿ – ಮೋದಿಗೆ ಎಎಪಿ

- Advertisement -
- Advertisement -

ಅಮೆರಿಕದಲ್ಲಿ ಭಾರತೀಯರ ಗಡೀಪಾರು ವಿಚಾರದ ಬಗ್ಗೆ ಗಟ್ಟಿಯಾಗಿ ಧ್ವನಿಯೆತ್ತುವಂತೆ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಕೇಳಿದ್ದು, ಟ್ರಂಪ್ ಅವರ ಕೈಗೊಂಬೆಯಾಗದಂತೆ ಹೇಳಿದ್ದಾರೆ. ಟ್ರಂಪ್ ಕೈಗೊಂಬೆಯಾಗಬೇಡಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಬೆದರಿಕೆಗೆ” ಒಳಗಾಗದಂತೆ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಹೇಳಿದ್ದು, ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಟ್ರಂಪ್ ಅವರ ಸ್ಫೋಟಕ ಮಾತುಕತೆಯನ್ನು ಉಲ್ಲೇಖಿಸಿದ್ದಾರೆ.

ಟ್ರಂಪ್ ಮತ್ತು ಝೆಲೆನ್ಸ್ಕಿ ನಡುವಿನ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಜಯ್ ಸಿಂಗ್, ಈ ಸಂಭಾಷಣೆಯಲ್ಲಿ ಟ್ರಂಪ್ ಬೆದರಿಸುತ್ತಿದ್ದಾರೆ ಎಂಬುದು ಸಾಬೀತಾಗಿದೆ. ಆದ್ದರಿಂದ ಮೋದಿ ಅವರು ಟ್ರಂಪ್ ಅವರ ಕೈಗೊಂಬೆಯಾಗುವ ಬದಲು, ಅಪರಾಧಿಗಳಂತೆ ಸಂಕೋಲೆಗಳಲ್ಲಿ ಭಾರತೀಯರನ್ನು ಭಾರತಕ್ಕೆ ಕತೆತರುವ ವಿಷಯದ ಬಗ್ಗೆ ಗಟ್ಟಿಯಾಗಿ ಧ್ವನಿಯೆತ್ತಬೇಕು ಎಂದು ಹೇಳಿದ್ದಾರೆ.

ಮಾಜಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ಅವರ ಪ್ರಸಿದ್ಧ ಹೇಳಿಕೆಯಾದ ”ಅಮೆರಿಕದ ಶತ್ರುವಾಗುವುದು ಅಪಾಯಕಾರಿ, ಆದರೆ ಸ್ನೇಹಿತನಾಗಿರುವುದು ಮಾರಕ” ಎಂಬ ವಾಕ್ಯವನ್ನು ಸಂಜಯ್ ಸಿಂಗ್ ಅವರು ಟ್ವೀಟ್ ಮಾಡಿದ್ದಾರೆ. ಟ್ರಂಪ್ ಕೈಗೊಂಬೆಯಾಗಬೇಡಿ

ಈ ತಿಂಗಳ ಆರಂಭದಲ್ಲಿ ಅಮೆರಿಕವು ಭಾರತದ ಅಕ್ರಮ ವಲಸಿಗರನ್ನು ಕಾಲುಗಳಿಗೆ ಸರಪಳಿ ಮತ್ತು ಕೈಕೋಳ ಹಾಕಿ ಗಡೀಪಾರು ಮಾಡಿತ್ತು. ಈ ವಿಚಾರದ ಬಗ್ಗೆ ಸಂಸತ್ತಿನಲ್ಲಿ ತೀವ್ರ ವಾಗ್ವಾದ ನಡೆದಿತ್ತು. ಟ್ರಂಪ್ ಅಧಿಕಾರಕ್ಕೆ ಏರಿದ ನಂತರ ಅಮೆರಿಕದಲ್ಲಿ ಅಕ್ರಮ ವಲಸೆಯ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಭಾರತೀಯರನ್ನು ಮೂರು ಅಮೆರಿಕದ ಮಿಲಿಟರಿ ವಿಮಾನಗಳಲ್ಲಿ ಗಡೀಪಾರು ಮಾಡಲಾಗಿದೆ.

ಇತ್ತಿಚೆಗೆ ಅಮೆರಿಕದ ವೈಟ್‌ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಝೆಲೆನ್ಸ್ಕಿ, ಟ್ರಂಪ್ ಮತ್ತು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಡುವೆ ತೀವ್ರ ವಾಗ್ವಾದದ ನಡೆದಿದೆ. ಈ ವಿಡಿಯೊ ವೈರಲ್ ಆಗಿದ್ದು, ರಷ್ಯಾದೊಂದಿಗಿನ ಯುದ್ಧದಲ್ಲಿ ಉಕ್ರೇನ್‌ಗೆ ಅಮೆರಿಕ ನೀಡಿದ ಬೆಂಬಲಕ್ಕೆ ಕೃತಜ್ಞತೆ ತೋರಿಸಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಅವರು ಝೆಲೆನ್ಸ್ಕಿಯನ್ನು ಟೀಕಿಸಿದ್ದಾರೆ. ಆದರೆ ಝೆಲೆನ್ಸ್ಕಿ ಇದನ್ನು ನಿರಾಕರಿಸಿ ಅವರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...