Homeಅಂತರಾಷ್ಟ್ರೀಯಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

- Advertisement -
- Advertisement -

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ (ಫೆ.21) ಅದನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿದ್ದಾರೆ.

“ನ್ಯಾಯಾಲಯವು ನಿನ್ನೆ ಸುಂಕಗಳ ಕುರಿತು ನೀಡಿದ ಹಾಸ್ಯಾಸ್ಪದ, ಕಳಪೆಯಾಗಿ ಬರೆಯಲ್ಪಟ್ಟ ಮತ್ತು ಅತಿಹೆಚ್ಚು ಅಮೆರಿಕನ್ ವಿರೋಧಿ ಎನ್ನಬಹುದಾದ ತೀರ್ಪನ್ನು ಸಂಪೂರ್ಣವಾಗಿ, ವಿವರವಾಗಿ ಮತ್ತು ಸಮಗ್ರವಾಗಿ ಪರಿಶೀಲಿಸಿದ ನಂತರವೇ ನಾನು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ವೇದಿಕೆಯಲ್ಲಿ ತಿಳಿಸಿದ್ದಾರೆ.

“ಕಾನೂನಿನ ಅಡಿಯಲ್ಲಿ ಸಂಪೂರ್ಣವಾಗಿ ಅವಕಾಶವಿರುವ ಮತ್ತು ಈಗಾಗಲೇ ಕಾನೂನುಬದ್ಧವಾಗಿ ಸಾಬೀತಾಗಿರುವ ಶೇಕಡ 15ರ ಮಟ್ಟಕ್ಕೆ ನಾನು ಈ ಸುಂಕಗಳನ್ನು ಏರಿಸುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

“ಮುಂದಿನ ಕೆಲವೇ ತಿಂಗಳುಗಳಲ್ಲಿ, ಟ್ರಂಪ್ ಆಡಳಿತವು ಹೊಸ ಮತ್ತು ಕಾನೂನುಬದ್ಧವಾಗಿ ಅನುಮತಿಸಬಹುದಾದ ಸುಂಕಗಳನ್ನು ನಿರ್ಧರಿಸಿ ಜಾರಿಗೆ ತರಲಿದೆ. ಅದು ಅಮೆರಿಕವನ್ನು ಮತ್ತೆ ಮಹಾನ್ ರಾಷ್ಟ್ರವನ್ನಾಗಿ ಮಾಡುವ ನಮ್ಮ ಅತ್ಯಂತ ಯಶಸ್ವಿ ಪ್ರಕ್ರಿಯೆಯನ್ನು ಮುಂದುವರಿಸಲಿದೆ. ಅಮೆರಿಕ ಹಿಂದೆಂದಿಗಿಂತಲೂ ಶ್ರೇಷ್ಠವಾಗಲಿದೆ” ಎಂದು ಟ್ರಂಪ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಅಮೆರಿಕ ಸುಪ್ರೀಂ ಕೋರ್ಟ್ ಶುಕ್ರವಾರ (ಫೆ.20) ನೀಡಿದ ಮಹತ್ವದ ತೀರ್ಪಿನಲ್ಲಿ, ಸುಂಕಗಳನ್ನು ವಿಧಿಸಲು 1977ರ ಕಾನೂನೊಂದನ್ನು ಬಳಸುವ ಮೂಲಕ ಡೊನಾಲ್ಡ್ ಟ್ರಂಪ್ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಬರೆದ 6-3 ಬಹುಮತದ ತೀರ್ಪು, ಈ ಹಿಂದಿನ ಕೆಳಹಂತದ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರಗಳ ಕಾಯ್ದೆ (ಐಇಇಪಿಎ) ಅಧ್ಯಕ್ಷರಿಗೆ ಸುಂಕಗಳನ್ನು ವಿಧಿಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಂವಿಧಾನದ ಪ್ರಕಾರ ಸುಂಕಗಳನ್ನು ನಿರ್ಧರಿಸುವ ಅಧಿಕಾರ ಕೇವಲ ಕಾಂಗ್ರೆಸ್‌ಗೆ (ಅಮೆರಿಕದ ಸಂಸತ್ತು) ಸೇರಿದ್ದಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಈ ತೀರ್ಪನ್ನು ‘ಅವಮಾನಕರ’ ಎಂದು ಕರೆದಿದ್ದ ಟ್ರಂಪ್, ಪರ್ಯಾಯ ಕಾನೂನುಗಳನ್ನು (Section 122 of 1974’s Trade Act)ಬಳಸಿಕೊಂಡು ಶೇಕಡ 10 ಹೊಸ ಜಾಗತಿಕ ಸುಂಕವನ್ನು ಘೋಷಿಸಿದ್ದರು. ಈಗ ಅದನ್ನು ಶೇಕಡ 15ಕ್ಕೆ ಏರಿಸುವುದಾಗಿ ಘೋಷಣೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...