Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....